ಕನ್ನಡಪ್ರಭ ವಾರ್ತೆ ಶಿವಮೊಗ್ಗ
ತಾಲೂಕಿನಾದ್ಯಂತ ಓ.ಸಿ., ಇಸ್ಪೀಟ್ ಜೂಜುಗಳು, ಗಾಂಜಾ ಸೇವನೆಯಂಥ ಪ್ರಕರಣಗಳು ಹೆಚ್ಚುತ್ತಿವೆ. ಹಲವು ಬಾರಿ ಪೊಲೀಸ್ ಠಾಣೆಗಳಿಗೆ ದೂರು ಸಹ ನೀಡಲಾಗಿದೆ. ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೂ, ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಭದ್ರಾವತಿ ಶಾಸಕರ ಮಕ್ಕಳೇ ಅಕ್ರಮಕೂಟ ಕಟ್ಟಿಕೊಂಡು ರಾಜಕೀಯ ಲಾಭವನ್ನು ಬಳಸಿಕೊಂಡು ಅಧಿಕಾರಿಗಳಿಗೆ ಹಣದ ಆಮಿಷ ತೋರಿಸಿ, ಭದ್ರಾವತಿಯ ಜನರನ್ನು ದುಶ್ಚಟಗಳ ದಾಸರನ್ನಾಗಿ ಮಾಡುತ್ತಿದ್ದಾರೆ. ಇಸ್ಪೀಟ್ ದಂಧೆಯಂತೂ ಎಗ್ಗಿಲ್ಲದೆ ನಡೆಯುತ್ತಿದೆ. ಊರು-ಊರಿಗಳಿಗೂ ಹಬ್ಬಿದೆ. ಈ ಸಂಬಂಧ ಪ್ರಶ್ನೆ ಮಾಡಿದವರ ವಿರುದ್ಧವೇ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಾರೆ. ಜಾತಿ ನಿಂಧನೆ ಕೇಸು ಹಾಕಿಸುತ್ತಾರೆ. ಅಧಿಕಾರಿಗಳಿಗೆ ವರ್ಗಾವಣೆ ಮಾಡುವ ಬೆದರಿಕೆ ಹಾಕುತ್ತಾರೆ. ಆಡಳಿತ ಪಕ್ಷದವರು ಕೇಸು ಹಾಕಿಸಿಕೊಂಡರೇ ಒತ್ತಡ ಹೇರಿ ಕೇಸನ್ನು ತೆಗೆಸುತ್ತಾರೆ ಎಂದು ಆರೋಪಿಸಿದರು.ಭದ್ರಾವತಿಯಲ್ಲಿ ಭೂ ಮಾಫಿಯಾ ಕೂಡ ಹೆಚ್ಚಾಗಿದೆ. ಯೋಗಾನಂದ ಎನ್ನುವರ ಭೂಮಾಲೀಕರ ತೋಟಕ್ಕೆ ನುಗ್ಗಿ ದ್ವಂಸಪಡಿಸಿ, ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಆ ಕುಟುಂಬದ ಮೇಲೆ ಸುಳ್ಳು ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ. ಭದ್ರಾವತಿ ಡಿವೈಎಸ್ಪಿ ಅವರ ಗಮನಕ್ಕೆ ವಿಷಯ ತಂದರೆ, ಅವರು ಏನು ಕ್ರಮ ಕೈಗೊಂಡಿಲ್ಲ. ಹೆಚ್ಚಿನ ಪೊಲೀಸ್ ಅಧಿಕಾರಿಗಳು ಶಾಸಕರ ಆಣತಿ ಮೇರೆಗೆ ಕೆಲಸ ಮಾಡುತ್ತಾರೆ ಎಂದು ದೂರಲಾಯಿತು.
- - - -10ಎಸ್ಎಂಜಿಕೆಪಿ03: