ಕಂಪ್ಲಿ: ಪಟ್ಟಣದ ಹೊಸ ಬಸ್ ನಿಲ್ದಾಣಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಸೋಮವಾರ ಭೇಟಿ ನೀಡಿ ಪರಿಶೀಲಿಸಿ ನಡೆಸಿದರು.
ಈ ಕುರಿತು ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ಬಸ್ ನಿಲ್ದಾಣದಲ್ಲಿ ಸ್ವಚ್ಛತೆಯ ಕೊರತೆ ಇದೆ ಅಲ್ಲದೇ ವಿದ್ಯುತ್ ದೀಪಗಳ ಸಮಸ್ಯೆ ಇದ್ದು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಒತ್ತಾಯಿಸಿದರು.
ಈ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ ಅವರು, ಕಂಪ್ಲಿಯನ್ನು ಪ್ರವೇಶಿಸದೆ ಅನಧಿಕೃತವಾಗಿ ಕಡೆ ಬಾಗಿಲು ಸೇತುವೆ ಮೇಲೆ ತೆರಳುವ ಬಸ್ ಗಳಿಗೆ ಕಡಿವಾಣ ಹಾಕಲಾಗುವುದು. ಕಡೆ ಬಾಗಿಲು ಹಾಗೂ ಬುಕ್ಕಸಾಗರ ಬಳಿ ಎರಡು ಚೆಕ್ ಪೋಸ್ಟ್ ನಿರ್ಮಿಸಲಾಗುವುದು. ನಿಯಮ ಉಲ್ಲಂಘಿಸಿ ಸೇತುವೆ ಮಾರ್ಗವಾಗಿ ತೆರಳುವ ಬಸ್ ಗಳ ಡ್ರೈವರ್ ಹಾಗೂ ಕಂಡಕ್ಟರ್ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಕಂಪ್ಲಿಯಿಂದ ಬಳ್ಳಾರಿ ಹಾಗೂ ಕುರುಗೋಡು ಭಾಗಕ್ಕೆ ಕೂಡಲೇ ಬಸ್ ಸೌಲಭ್ಯ ಕಲ್ಪಿಸುವ ಕುರಿತು ಕ್ರಮ ವಹಿಸುವೆ. ಇನ್ನು ಡಿಪೋ ಆರಂಭಿಸುವ ವಿಚಾರ ಕುರಿತು ಶಾಸಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲಾಗುವುದು ಎಂದರು.ಇನ್ನು ನಿಲ್ದಾಣದಲ್ಲಿನ ಶೌಚಾಲಯಗಳನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಲು ಹಾಗೂ ಸೂಕ್ತ ವಿದ್ಯುತ್ ದೀಪ ಅಳವಡಿಕೆ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ವಿಭಾಗದ ವಿಭಾಗಿಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ ಬನ್, ಡಿಟಿಒ ಚಾಮರಾಜ್, ಮುಖ್ಯ ಅಭಿಯಂತರ ಬೋರಯ್ಯ, ಸಂಚಾರ ನಿಯಂತ್ರಕರಾದ ತಿಮ್ಮಪ್ಪ ಯಾದವ್, ಆದಿಶೇಷ ಸೇರಿದಂತೆ ಇದ್ದರು.