ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ರಾಜ್ಯ ಸರ್ಕಾರದ ಸೈಸೆಕ್ (ಸೈಬರ್ ಸೆಕ್ಯುರಿಟಿ ಕರ್ನಾಟಕ) ಮತ್ತು ಚೆನ್ನೈನ ತ್ರಿಶಾಕ್ ಫೌಂಡೇಶನ್ ಸಹಯೋಗದಲ್ಲಿ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆಯುವ ೩೫ ದಿನಗಳ (ಫೆ.೧೯ರಿಂದ ಮಾ.೨೨) ತರಬೇತಿಯ ಉದ್ಘಾಟನಾ ಕಾರ್ಯಕ್ರಮ ‘ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್ (ಸಿಎಸ್ಎಫ್ಎಸ್)’ನಲ್ಲಿ ಸೋಮವಾರ ಅವರು ಮಾತನಾಡಿದರು.
ಹೆಚ್ಚಿನ ಜನರು ಪ್ರತಿಷ್ಠೆಯ ಕಾರಣಕ್ಕಾಗಿ ತಮ್ಮ ವಿರುದ್ಧ ನಡೆದ ದಾಳಿಯನ್ನೇ ಮುಚ್ಚಿಡುತ್ತಾರೆ. ಇದು ಜೀವಕ್ಕೂ ಅಪಾಯ ತಂದ ನಿದರ್ಶನಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಾಗ ಎಚ್ಚರ ವಹಿಸಿ ಎಂದರು.ಸೈಸೆಕ್ ಕೇಂದ್ರದ ಮುಖ್ಯಸ್ಥ ಕಾರ್ತಿಕ್ ರಾವ್ ಬಿ. ಮಾತನಾಡಿ, ನಾವು ಫಿನಿಶಿಂಗ್ ಸ್ಕೂಲ್ ಕಾರ್ಯಕ್ರಮವನ್ನು ಮಾದರಿಯಾಗಿ ಆರಂಭಿಸಿದ್ದೇವೆ. ಭವಿಷ್ಯದಲ್ಲಿ ವ್ಯಾಪಕವಾಗಿ ಮಾಡುವ ಆಶಯ ಇದೆ. ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು ಇದರ ಆರಂಭದ ಆತಿಥ್ಯ ವಹಿಸಿದೆ ಎಂದರು.
ಕಾಲೇಜಿನ ಸೈಬರ್ ಸೆಕ್ಯುರಿಟಿ ಕ್ಲಬ್ ಸಂಯೋಜಕಿ ದೀಪಿಕಾ ಕಾಮತ್ ಸ್ವಾಗತಿಸಿದರು. ಉಪನ್ಯಾಸಕರಾದ ದೀಕ್ಷಾ, ವಿದ್ಯಾ ಅತಿಥಿಗಳನ್ನು ಪರಿಚಯಿಸಿದರು. ಭಾಗ್ಯಶ್ರೀ ವಂದಿಸಿದರು.
ಕರ್ನಾಟಕದ ೧೫ ಎಂಜಿನಿಯರಿಂಗ್ ಕಾಲೇಜುಗಳಿಂದ ಆಯ್ದ ೫೦ ಜನ ವಿದ್ಯಾರ್ಥಿಗಳು ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುತ್ತಿದ್ದು, ಸೈಬರ್ ಸೆಕ್ಯುರಿಟಿಗೆ ಸಂಬಂಧಿ ೨೦೦ ಗಂಟೆಗಳ ತರಬೇತಿ ಪಡೆಯಲಿದ್ದಾರೆ.ತ್ರಿಶಾಕ ಫೌಂಡೇಶನ್ ಯೋಜನಾ ನಿರ್ದೇಶಕ ಮೋಹನ್ ರಾಮ್, ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫರ್ನಾಂಡಿಸ್, ಸೈಬರ್ ಸೆಕ್ಯುರಿಟಿ ಎಂಜಿನಿಯರ್ ವಿನೀತ್ ಶೆಟ್ಟಿ ಮತ್ತು ಕೌಶಿಕ್ ಶೆಟ್ಟಿ ಉಪಸ್ಥಿತರಿದ್ದರು.