31 ಜಿಲ್ಲೆಗಳಲ್ಲಿ ಸೈಕಲ್ ಪ್ರವಾಸ : ಯುವಕನಿಂದ ಪರಿಸರ ಜಾಗೃತಿ

KannadaprabhaNewsNetwork |  
Published : Jun 28, 2024, 12:55 AM IST
ಚಿತ್ರ02: 7ನೇ ಹೊಸಕೋಟೆÀಯುವP 31 ಜಿಲ್ಲೆಗಳಿಗೆ ಸೈಕಲ್‌ನಲ್ಲಿ ತೆರಳಿ ಗಿಡ ನೆಟ್ಟು ಸಾರ್ವಜನಿಕರಲ್ಲಿ ಪರಿಸರಜಾಗೃತಿ ಮೂಡಿಸಿದರು. | Kannada Prabha

ಸಾರಾಂಶ

7ನೇ ಹೊಸಕೋಟೆಯ ಯುವಕ 31 ಜಿಲ್ಲೆಗಳಲ್ಲಿ ಸೈಕಲ್‌ ಮೂಲಕ ಪ್ರವಾಸ ಮಾಡಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದಾರೆ. ನೆಲ ಜಲ ಸಂರಕ್ಷಣೆಯಂತಹ ಚಟುವಟಿಕೆಗಳಲ್ಲಿ ತೊಡಗುವಂತೆ ಅರಿವು ಮೂಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

7ನೇ ಹೊಸಕೋಟೆ ಯುವಕನೋರ್ವ 31 ಜಿಲ್ಲೆಗಳಲ್ಲಿ ಸೈಕಲ್ ಮೂಲಕ ಪ್ರವಾಸ ಮಾಡಿ ಪ್ರತಿ ಜಿಲ್ಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಜನತೆಯಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಿದರು.

ಹವಾಮಾನ ವೈಪರೀತ್ಯಗೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಪ್ರಮಾಣ ಇಳಿಮುಖಗೊಂಡಿದ್ದು, ರಾಜ್ಯದ ಜನತೆಯು ಕುಡಿಯುವ ನೀರಿಗೆ ಹಾಹಕಾರಗೊಂಡಿದ್ದನ್ನು ಮನಗಂಡ 7ನೇ ಹೊಸಕೋಟೆಯ ನಿವಾಸಿ ಪೈಂಟರ್ ವೃತ್ತಿಯ ಪ್ರಶಾಂತ್ ಎಂಬ ಯುವಕ ಬೈಸಿಕಲ್ ಮೂಲಕ ಸಂಚರಿಸಿ ಕರ್ನಾಟಕ ದ 31 ಜಿಲ್ಲೆಗಳಿಗೆ 26 ದಿನಗಳಲ್ಲಿ ತೆರಳಿ ಪ್ರತೀ ಜಿಲ್ಲೆಯಲ್ಲಿ ಒಂದೊಂದು ಗಿಡವನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.

ನೆಲ-ಜಲ ಸಂರಕ್ಷಣೆಯಂತಹ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಜಾಗೃತಿ ಮೂಡಿಸಿದರು.

7ನೇ ಹೊಸಕೋಟೆ ಗ್ರಾಮದ ಸುರೇಶ ಹಾಗೂ ಉಷಾ ದಂಪತಿ ಪುತ್ರರಾಗಿರುತ್ತಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ