ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಸ್ನೇಹೀತರು, ಹಿತೈಷಿಗಳ ಹಾರೈಕೆ
ಅಯೋಧ್ಯೆಗೆ ತೆರಳುವ ಮುನ್ನ ಭಾನುವಾರ ಬೆಳಿಗ್ಗೆ ಬಜಾರ್ ರಸ್ತೆಯ ಶ್ರೀ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ತಂಡ ಈ ಸಂದರ್ಭದಲ್ಲಿ ನೆರೆದಿದ್ದ ಹಿತೈಷಿಗಳು, ಸ್ನೇಹಿತರು, ಬಂಧುಗಳು ಶುಭ ಹಾರೈಕೆಗಳೊಂದಿಗೆ ಅಯೋಧ್ಯೆಗೆ ತಮ್ಮ ಸೈಕಲ್ ಯಾತ್ರೆಯನ್ನು ಆರಂಭಿಸಿದರು.ಈ ವೇಳೆ ಮಾತನಾಡಿದ ತಂಡ, ಅಯೋಧ್ಯೆಗೆ ಬೈಕ್, ರೈಲು ಸೇರಿದಂತೆ ಬೇರೆ ಬೇರೆ ರೀತಿಯಲ್ಲಿ ಸಾಕಷ್ಟು ಭಕ್ತರು ಪ್ರಯಾಣಿಸುತ್ತಾರೆ. ಆದರೆ ನಮಗೆ ಸೈಕಲ್ ಮೂಲಕ ಅಯೋಧ್ಯೆಗೆ ಹೋಗಲು ಇಷ್ಟ. ಆದ್ದರಿಂದ ಬಾನುವಾರ ಶ್ರೀ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸೈಕಲ್ ಮೂಲಕ ಅಯೋಧ್ಯೆಗೆ ಪ್ರಯಾಣ ಆರಂಭಿಸಿದ್ದೇವೆ ಎಂದು ತಿಳಿಸಿತು.ಯುವಕರಲ್ಲಿ ರಾಮಭಕ್ತಿ ವೃದ್ಧಿಸಲಿ
ಹಿರಿಯರಾದ ಕೃಷ್ಣಮೂರ್ತಿ ಹಾಗೂ ಶ್ರೀನಿವಾಸರಾವ್ ಮಾತನಾಡಿ, ಬಂಗಾರಪೇಟೆ ಯುವಕರು ಹಲವು ಯುವಕರಿಗೆ ಪ್ರೇರಣೆಯಾಗಿದ್ದಾರೆ. ನಮ್ಮ ದೇಶದ ಸಂಸ್ಕೃತಿ ಎತ್ತಿ ಹಿಡಿಯಲು, ಯುವಶಕ್ತಿಯಲ್ಲಿ ರಾಮ ಭಕ್ತಿ ವೃದ್ಧಿಯಾಗಬೇಕೆಂಬ ಕಾರಣಕ್ಕೆ ಅಯೋಧ್ಯೆಗೆ ಸೈಕಲ್ ಯಾತ್ರೆ ಸಂಕಲ್ಪ ತೊಟ್ಟಿರುವುದು ಹೆಮ್ಮೆಯ ವಿಚಾರ ಎಂದರು.