ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಎಂಟು ಜನರಿಗೆ ಗಾಯ

KannadaprabhaNewsNetwork |  
Published : Sep 28, 2025, 02:00 AM IST
27ಎಚ್‌ಪಿಟಿ1ಎ:ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡು ಜಿಂದಾಲ್ ನ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ಸಚಿವ ಜಮೀರ್ ಅಹಮದ್ ಖಾನ್ ವಿಚಾರಿಸಿದರು.27ಎಚ್ ಪಿಟಿ1ಬಿಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಜಖಂಗೊಂಡ ಮನೆಯಲ್ಲಿ ರಕ್ಷಣಾ ಕಾರ್ಯಕೈಗೊಂಡ ಅಗ್ನಿಶಾಮಕದಳ. | Kannada Prabha

ಸಾರಾಂಶ

ಅಡುಗೆ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಎಂಟು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ‌.

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಶನಿವಾರ ಬೆಳಗಿನಜಾವ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಎಂಟು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ‌. ಸ್ಫೋಟದ ರಭಸಕ್ಕೆ ಮನೆ ಗೋಡೆ ಸಂಪೂರ್ಣ ಕುಸಿದಿದೆ.

ಸಿಲಿಂಡರ್ ಸಿಡಿದು ವಕೀಲ ಹಾಲಪ್ಪ (40), ಅವರ ಪತ್ನಿ ಕವಿತಾ (35), ತಾಯಿ ಗಂಗಮ್ಮ (63) ಮೈಲಾರಪ್ಪ (55), ಮಲಿಯಮ್ಮ (20), ಮಲ್ಲ (17), ಕೃತಿಕಾ (7), ಕಾವೇರಿ (3) ಎಂಬವರು ಗಾಯಗೊಂಡಿದ್ದಾರೆ. ಬಳ್ಳಾರಿಯ ತೋರಣಗಲ್ಲು ಗ್ರಾಮದ ಜಿಂದಾಲ್ ಸಂಜೀವಿನಿ ಅಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸಪೇಟೆ - ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆ ಇದೆ. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಶನಿವಾರ ಬೆಳಗ್ಗೆ 5 ಗಂಟೆ ಹೊತ್ತಿಗೆ ಕವಿತಾ ನವರಾತ್ರಿ ನಿಮಿತ್ತ ಬನ್ನಿ ಮಹಾಕಾಳಿ ದೇಗುಲಕ್ಕೆ ಹೋಗಿ ಬಂದು ಟೀ ಮಾಡುವಾಗ ಗ್ಯಾಸ್ ವಾಸನೆ ಬಂದಿದೆ ಎಂದು ಮಲಗಿದ್ದ ತನ್ನ ಪತಿ ಹಾಲಪ್ಪ ಅವರನ್ನು ಎಬ್ಬಿಸಿದ್ದಾರೆ. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಎಂಟು ಜನರು ಗಾಯಗೊಂಡಿದ್ದಾರೆ. ಸ್ಫೋಟದಿಂದ ಮನೆ ಶೇ.50ರಷ್ಟು ಧ್ವಂಸವಾಗಿದೆ. ಗಾಯಾಳುಗಳನ್ನು ತೋರಣಗಲ್‌ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ. ಅಗ್ನಿ ಶಾಮಕದಳ ಸಿಬ್ಬಂದಿ ಹಾಗೂ ಪೊಲೀಸರು ಜಖಂಗೊಂಡ ಮನೆಯಲ್ಲಿ ರಕ್ಷಣಾ ಕಾರ್ಯ ಕೈಗೊಂಡರು.

ಸಚಿವ ಜಮೀರ್ ಭೇಟಿ:

ಅಡುಗೆ ಸಿಲಿಂಡರ್ ಅವಘಡ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಲಿಂಡರ್ ಸ್ಫೋಟದಲ್ಲಿ ಜಗತ್ತು ನೋಡದ ಎರಡು ವರ್ಷದ ಮಗು ಶೇ.70 ಗಾಯವಾಗಿದೆ. ಆ ಮಗು ತಂದೆನೂ ಜೈಲಲ್ಲಿದ್ದಾರಂತೆ. ಕೆಲ ಗಾಯಾಳುಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಿದೆ. ಬೆಂಗಳೂರಿನಿಂದ ವೈದ್ಯರು ಬರುತ್ತಿದ್ದಾರೆ. ಕೆಲವರನ್ನು ಬೇರೆ ಕಡೆ, ಇನ್ನು ಕೆಲವರಿಗೆ ಇಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿಗೆ ಕಳಿಸಲು ತೀರ್ಮಾನ ಮಾಡಲಾಗುತ್ತದೆ. ಸರ್ಕಾರದಿಂದಲೇ ಚಿಕಿತ್ಸೆಯ ವೆಚ್ಚ ಭರಿಸಲಾಗುತ್ತದೆ. ಘಟನೆ ಕುರಿತು ವಾಸ್ತವ ವರದಿ ನೀಡಿದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಶಾಸಕ ಎನ್‌.ಟಿ. ಶ್ರೀನಿವಾಸ್, ಹುಡಾ ಅಧ್ಯಕ್ಷ ಎಚ್‌.ಎನ್. ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಎಸ್ಪಿ ಜಾಹ್ನವಿ, ಎಎಸ್ಪಿ‌ ಮಂಜುನಾಥ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ