ಮದ್ದೂರು: ಶೋಷಿತರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು ಎಂದು ತಹಸೀಲ್ದಾರ್ ಡಾ.ಶಿವಕುಮಾರ ಬಿರಾದಾರ ಹೇಳಿದರು.
ಅರಸು ಅವರು ಮೇಲ್ವರ್ಗದಿಂದ ಹಿಡಿದು ತಳ ಸಮುದಾಯದ ಪ್ರತಿಯೊಬ್ಬರಿಗೂ ಸಮಾನ ಅವಕಾಶ ದೊರೆಯಬೇಕು. ಆರ್ಥಿಕ ಸ್ವಾತಂತ್ರ್ಯ ಜೊತೆಗೆ ಸಾಮಾಜಿಕ ಗೌರವ ಮತ್ತು ಮಾನಸಿಕ ನೆಮ್ಮದಿ ದೊರೆಯಬೇಕು ಎನ್ನುವುದು ಅವರ ಆಶಯವಾಗಿತ್ತು ಎಂದು ಅಭಿಪ್ರಾಯಪಟ್ಟರು.
ಭೂ ಮಾಲೀಕರ ಕುಟುಂಬದಲ್ಲಿ ಜನಿಸಿದರೂ ಸಹ ದೇವರಾಜ ಅರಸು ಅವರು ಹಿಂದುಳಿದ ಶ್ರಮಿಕರಿಗೆ ಅಪಾರ ಗೌರವ ನೀಡುತ್ತಿದ್ದರು. ಶ್ರಮಜೀವಿಗಳನ್ನು ಸ್ನೇಹ ಮತ್ತು ಸಮಾನತೆಯಿಂದ ಕಾಣುತ್ತಿದ್ದರು ಎಂದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನೀತಾ ಗುಳ್ಳಪ್ಪನವರ್ ಮಾತನಾಡಿ, ಭೂ ಸುಧಾರಣೆ ಕಾಯ್ದೆಯನ್ನು ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ಜಾರಿಗೆ ತಂದು ಉಳುವವನೇ ಭೂಮಿ ಒಡೆಯ ಎಂಬ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ದೇವರಾಜ ಅರಸು ಅವರು ಬಡ ರೈತರ ಪಾಲಿಗೆ ಆಶಾ ಕಿರಣವಾಗಿದ್ದಾರೆ ಎಂದು ಬಣ್ಣಿಸಿದರು.