ಡಿ. ದೇವರಾಜ ಅರಸುರವರ ಸಾಮಾಜಿಕ ಕಳಕಳಿ ಮಾದರಿ-ತಹಸೀಲ್ದಾರ್‌

KannadaprabhaNewsNetwork |  
Published : Aug 22, 2026, 03:45 AM IST
ಹಿರೇಕೆರೂರು ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾ ಭವನದಲ್ಲಿ ಏರ್ಪಡಿಸಿದ್ದ ತಾಲೂಕು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎಂ. ರೇಣುಕಾ ಅವರು ಮಾತನಾಡಿದರು. | Kannada Prabha

ಸಾರಾಂಶ

ಡಿ. ದೇವರಾಜ ಅರಸುರವರ ಸಾಮಾಜಿಕ ಕಳಕಳಿ, ನ್ಯಾಯ ಪರವಾದ ಹೋರಾಟ ಪ್ರತಿಯೊಬ್ಬರಿಗೂ ಮಾದರಿ. ಈ ದೇಶದ ರಾಜಕೀಯ ಇತಿಹಾಸದಲ್ಲಿ ಹಿಂದುಳಿದವರ ಪರ ಧ್ವನಿ ಎತ್ತುವ ಮೂಲಕ ಅವರಿಗೆ ಸಮಾನತೆಯ ಹಕ್ಕು ಕಲ್ಪಿಸಲು ಶ್ರಮಿಸಿದ ಕೀರ್ತಿ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ತಹಸೀಲ್ದಾರ್ ಎಂ. ರೇಣುಕಾ ಹೇಳಿದರು.

ಹಿರೇಕೆರೂರು: ಡಿ. ದೇವರಾಜ ಅರಸುರವರ ಸಾಮಾಜಿಕ ಕಳಕಳಿ, ನ್ಯಾಯ ಪರವಾದ ಹೋರಾಟ ಪ್ರತಿಯೊಬ್ಬರಿಗೂ ಮಾದರಿ. ಈ ದೇಶದ ರಾಜಕೀಯ ಇತಿಹಾಸದಲ್ಲಿ ಹಿಂದುಳಿದವರ ಪರ ಧ್ವನಿ ಎತ್ತುವ ಮೂಲಕ ಅವರಿಗೆ ಸಮಾನತೆಯ ಹಕ್ಕು ಕಲ್ಪಿಸಲು ಶ್ರಮಿಸಿದ ಕೀರ್ತಿ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ತಹಸೀಲ್ದಾರ್ ಎಂ. ರೇಣುಕಾ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾಭವನದಲ್ಲಿ ಏರ್ಪಡಿಸಿದ್ದ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1972ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅರಸು ಅವರು ರಾಜ್ಯದ ಆಡಳಿತಕ್ಕೆ ಹೊಸ ಸಾಮಾಜಿಕ ದೃಷ್ಟಿಕೋನ ನೀಡಿದರು. ಆಡಳಿತದ ಕೇಂದ್ರಬಿಂದುವಿನಲ್ಲಿ ಸಾಮಾನ್ಯ ನಾಗರಿಕನನ್ನು ಇರಿಸಿ. ದಶಕಗಳಕಾಲ ಅವಕಾಶಗಳಿಂದ ದೂರವಿದ್ದ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗ, ಭೂಮಿ ಹಾಗೂ ಸಾಮಾಜಿಕ ಗೌರವ ದೊರಕಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡರು ಎಂದರು.

ಪ್ರಾಂಶುಪಾಲ ಎಸ್.ಪಿ. ಗೌಡರ ಉಪನ್ಯಾಸ ನೀಡಿದರು. ಇದೇ ವೇಳೆ ತಾಲೂಕಿನ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಖಾರ ನೀಡಿ ಸನ್ಮಾನಿಸಲಾಯಿತು. ಪಟ್ಟಣದ ಜಿ.ಬಿ. ಶಂಕರರಾವ್ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಭಾವಚಿತ್ರ ಮೆರವಣಿಗೆ ನಡೆಯಿತು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಎಂ. ಹರಿಯಾಳ, ಪಪಂ ಮುಖ್ಯಾಧಿಕಾರಿ ಕೋಡಿ ಭೀಮರಾಯ, ಎನ್.ಟಿ., ಸಹಾಯಕ ಕೃಷಿ ನಿರ್ದೇಶಕ ಮಾರುತಿ ಅಂಗರಗಟ್ಟಿ, ಜಿಲ್ಲಾಧ್ಯಕ್ಷ ಗಿರೀಶ, ಬಾರ್ಕಿ, ಸಿ.ಎಸ್. ಬಾಲಣನವರ, ಮಂಜುನಾಥ ಬಣಕಾರ, ತಾಲೂಕು ಮಟ್ಟದ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾನ್ಯ ಜನರ ಬದುಕಿನ ಭರವಸೆಯಾಗಿದ್ದ ಅರಸು: ಎಂ.ಶೈಲಾ
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶೀಘ್ರ ಮೆಟ್ರೋ ಆರಂಭ ಸಾಧ್ಯತೆ