ಕನ್ನಡಪ್ರಭ ವಾರ್ತೆ ಬಳ್ಳಾರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ 2023- 24ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ಭತ್ತ ಖರೀದಿ ಕೇಂದ್ರಗಳು ಪ್ರಾರಂಭವಾಗಿವೆ. ಬೆಂಬಲ ಬೆಲೆಯಲ್ಲಿ ರಾಗಿ ಮತ್ತು ಜೋಳ ಬೆಳೆಗಳನ್ನು ಖರೀದಿಸಲು ರೈತರು ಡಿ. 1ರಿಂದ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಖರೀದಿ ಕೇಂದ್ರವಿರುವ ಎಪಿಎಂಸಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಖರೀದಿ ಪ್ರಕ್ರಿಯೆಯನ್ನು 2024ರ ಜ. 1ರಿಂದ ಆರಂಭವಾಗಿ 2024ರ ಮಾರ್ಚ್ ಅಂತ್ಯದವರೆಗೆ ಖರೀದಿ ಮಾಡಲಾಗುತ್ತದೆ. ಇದಕ್ಕೆ ಬೇಕಾದ ನೋಂದಣಿ ಮತ್ತು ಖರೀದಿ ಸಿದ್ಧತೆ, ಸಂಗ್ರಹಕ್ಕೆ ಗೋದಾಮುಗಳನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.ಖರೀದಿ ಕೇಂದ್ರಗಳು:
2023- 24ನೇ ಸಾಲಿಗೆ ಖರೀದಿಸುವ ಕೃಷಿ ಉತ್ಪನ್ನಗಳಾದ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಲ್ಗೆ ₹2183, ಗ್ರೇಡ್ ಎ- ಭತ್ತಕ್ಕೆ ₹2203, ರಾಗಿಗೆ ₹3846, ಹೈಬ್ರೀಡ್- ಬಿಳಿ ಜೋಳಕ್ಕೆ ₹3180, ಮಾಲ್ದಂಡಿ- ಬಿಳಿ ಜೋಳಕ್ಕೆ ₹3225 ಬೆಂಬಲ ಬೆಲೆಗಳಾಗಿವೆ ಎಂದರು.
ಬೆಂಬಲ ಬೆಲೆ ಕಾರ್ಯಾಚರಣೆ ಬಗ್ಗೆ ಖರೀದಿ ಏಜೆನ್ಸಿಗಳು, ಕೃಷಿ ಇಲಾಖೆ, ಕೃಷಿ ಮಾರುಕಟ್ಟೆ ಇಲಾಖೆಗಳು ಕರಪತ್ರ, ಡಂಗೂರ, ಬ್ಯಾನರ್ ಮೂಲಕ ವ್ಯಾಪಕ ಪ್ರಚಾರ ನೀಡಬೇಕು ಎಂದರು.
ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಸಕೀನಾ, ಕೃಷಿ ಇಲಾಖೆಯ ಉಪ ನಿರ್ದೇಶಕ ದಯಾನಂದ, ಕೆಎಫ್ಸಿಎಸ್ಸಿಯ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಶಾಖಾ ವ್ಯವಸ್ಥಾಪಕರು, ಎಪಿಎಂಸಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.