ದೊಡ್ಡರಾಯಪೇಟೆ ಪಿಎಸಿಸಿ ಬ್ಯಾಂಕ್ಅ ಧ್ಯಕ್ಷರಾಗಿ ಡಿ.ಸೋಮಣ್ಣ ಆಯ್ಕೆ

KannadaprabhaNewsNetwork |  
Published : Oct 06, 2024, 01:28 AM IST
ಚಾಮರಾಜನಗರ ತಾಲ್ಲೂಕಿನ ದೊಡ್ಡರಾಯಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ. ಸೋಮಣ್ಣ, ಉಪಾಧ್ಯಕ್ಷ ರಾಗಿ ಎಚ್.ಎಸ್. ಮಹದೇವಯ್ಯ  ಅವಿರೋಧವಾಗಿ ಆಯ್ಕೆಯಾದರು. | Kannada Prabha

ಸಾರಾಂಶ

ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ.ಸೋಮಣ್ಣ, ಉಪಾಧ್ಯಕ್ಷ ರಾಗಿ ಎಚ್.ಎಸ್.ಮಹದೇವಯ್ಯ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಾಲೂಕಿನ ದೊಡ್ಡರಾಯಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ.ಸೋಮಣ್ಣ, ಉಪಾಧ್ಯಕ್ಷ ರಾಗಿ ಎಚ್.ಎಸ್. ಮಹದೇವಯ್ಯ ಅವಿರೋಧವಾಗಿ ಆಯ್ಕೆಯಾದರು.

ಗ್ರಾಮದ ಸಂಘದ ಕಚೇರಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷ ರ ಆಯ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಡಿ. ಸೋಮಣ್ಣ, ಉಪಾಧ್ಯಕ್ಷ ಸ್ಥಾನಕ್ಕೆ ಎಚ್.ಎಸ್.ಮಹದೇವಯ್ಯ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿದ್ದ ಸಹಕಾರ ಇಲಾಖೆಯ ಅಧಿಕಾರಿ ನಾಗೇಶ್ ಅವರು ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧಿಕೃತವಾಗಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯನ್ನು ಘೋಷಣೆ ಮಾಡಿದರು.ನೂತನ ಅಧ್ಯಕ್ಷ ಡಿ.ಸೋಮಣ್ಣ ಅಧಿಕಾರ ವಹಿಸಿಕೊಂಡು ಮಾತನಾಡಿ, ಸಂಘದ ಎಲ್ಲಾ ನಿರ್ದೇಶಕರು ಅವಿರೋಧವಾಗಿ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಸಂಘವನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ದೇಶಕರು ಒಗ್ಗಟ್ಟಿನಿಂದ ಸುಸ್ತಿದಾರ ರೈತರನ್ನು ಭೇಟಿ ಮಾಡಿ, ಸಾಲ ಮರು ಪಾವತಿಸಿ, ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ಕೊಡಿಸುವ ಮೂಲಕ ರೈತರನ್ನು ಆರ್ಥಿಕ ಅಭಿವೃದ್ದಿಪಡಿಸುವ ಜೊತೆಗೆ ಸಂಘವನ್ನು ಮುನ್ನಡೆಸೋಣ ಎಂದರು. ಸಹಕಾರ ಸಂಘದ ಮಾಜಿ ಅಧ್ಯಕ್ಷ ದೊಡ್ಡರಾಯಪೇಟೆ ಗಿರೀಶ್, ನೂತನ ನಿರ್ದೇಶಕರಾದ ಪಾಪಣ್ಣ, ಆರ್.ಮಹದೇವಸ್ವಾಮಿ, ನಾಗರಾಜು, ಪುಟ್ಟಮ್ಮ, ದ್ರಾಕ್ಷಾಯಿಣಿ, ಜಿ. ಸೋಮಣ್ಣ, ಹಂಡ್ರಕಳ್ಳಿ ಡೇರಿ ಮಹದೇವಪ್ಪ, ಮಹದೇವ, ಎಂಡಿಸಿಸಿ ಮೇಲ್ವಿಚಾರಕ ಡಿ. ಮಂಜು, ಸಂಘದ ಸಿಇಓ ಮಹದೇವಯ್ಯ, ಡೇರಿ ಮಾಜಿ ಅಧ್ಯಕ್ಷ ಶಿವರುದ್ರಸ್ವಾಮಿ, ಮುಖಂಡರಾದ ಮಹದೇವಸ್ವಾಮಿ, ರಾಜು, ಮಹೇಶ್. ಶಿವಾನಂದಸ್ವಾಮಿ, ಪ್ರದೀಪ್, ಹಂಡ್ರಕಳ್ಳಿ ಯೋಗೇಶ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ : ಪರಂ ಭರವಸೆ
5 ಪಾಲಿಕೆಗೆ ಜಿಎಸ್‌ಟಿಯಲ್ಲಿ ಪಾಲು ಕೊಡಲು ಆಯೋಗ ಶಿಫಾರಸು