ರಾಜ್ಯಾದ್ಯಂತ ಹೈನುಗಾರರ ಪ್ರೋತ್ಸಾಹಧನ ಬಾಕಿ: ಒಪ್ಪಿದ ಪಶುಸಂಗೋಪನೆ ಸಚಿವ

KannadaprabhaNewsNetwork |  
Published : Mar 06, 2025, 12:34 AM IST
ಪ್ರತಾಪ್‌ | Kannada Prabha

ಸಾರಾಂಶ

ಹೈನುಗಾರರಲ್ಲಿ ಸಾಮಾನ್ಯ ವರ್ಗದವರಿಗೆ 613.58 ಕೋಟಿ ರು., ಪರಿಶಿಷ್ಟ ಜಾತಿಯವರಿಗೆ 18.29 ಕೋಟಿ ರು. ಹಾಗೂ ಪರಿಶಿಷ್ಟ ಪಂಗಡದವರಿಗೆ 24.20 ಕೋಟಿ ರು.ಗಳು ಪಾವತಿಸಲು ಬಾಕಿ ಇದೆ. ಬಾಕಿ ಇರುವ ಹಾಲಿನ ಪ್ರೋತ್ಸಾಹಧನವನ್ನು ಹೈನುಗಾರರಿಗೆ ಪಾವತಿಸಲು ಹೆಚ್ಚುವರಿ ಅನುದಾನ ಕೋರಿ ಸಲ್ಲಿಸಿರುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

ಬೆಳ್ತಂಗಡಿ: ಸರ್ಕಾರವು ರಾಜ್ಯಾದ್ಯಂತ ಇರುವ ಹೈನುಗಾರರಿಗೆ ಕೊಡುವ ಪ್ರೋತ್ಸಾಹಧನವನ್ನು ಬಾಕಿ ಇರಿಸಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಒಪ್ಪಿಕೊಂಡಿದ್ದಾರೆ.

ಬುಧವಾರ ವಿಧಾನ ಪರಿಷತ್‌ನಲ್ಲಿ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಹೈನುಗಾರರಲ್ಲಿ ಸಾಮಾನ್ಯ ವರ್ಗದವರಿಗೆ 613.58 ಕೋಟಿ ರು., ಪರಿಶಿಷ್ಟ ಜಾತಿಯವರಿಗೆ 18.29 ಕೋಟಿ ರು. ಹಾಗೂ ಪರಿಶಿಷ್ಟ ಪಂಗಡದವರಿಗೆ 24.20 ಕೋಟಿ ರು.ಗಳು ಪಾವತಿಸಲು ಬಾಕಿ ಇದೆ. ಬಾಕಿ ಇರುವ ಹಾಲಿನ ಪ್ರೋತ್ಸಾಹಧನವನ್ನು ಹೈನುಗಾರರಿಗೆ ಪಾವತಿಸಲು ಹೆಚ್ಚುವರಿ ಅನುದಾನ ಕೋರಿ ಸಲ್ಲಿಸಿರುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದರು.ಬಿಡುಗಡೆಯಾಗದ ಅನುದಾನ:

ದ.ಕ. ಜಿಲ್ಲೆಯ ಕಡಬ ಪ.ಪಂ.ಗೆ 85 ಲಕ್ಷ ರು., ಬಜ್ಪೆ ಪ.ಪಂ.ಗೆ 113 ಲಕ್ಷ ರು., ಕಿನ್ನಿಗೋಳಿ ಪಂ.ಪಂ.ಗೆ 153 ಲಕ್ಷ ರು. ಹಾಗೂ ಬೈಂದೂರು ಪ.ಪಂ.ಗೆ 211 ಲಕ್ಷ ರು.ಗಳ ಅನುದಾನ ಖೋತಾ ಅಗಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಕೆಲ ಪಟ್ಟಣ ಪಂಚಾಯತಿ, ಪುರಸಭೆ ಮತ್ತು ನಗರಸಭೆಯಲ್ಲಿ ಚುನಾಯಿತ ಸದಸ್ಯರು ಇಲ್ಲದೇ ಇರುವುದರಿಂದ ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಅನುದಾನ ಪಡೆಯಲು ಅರ್ಹವಾಗಿಲ್ಲದ ನಗರ ಸ್ಥಳೀಯ ಸಂಸ್ಥೆಗಳ ವಿವರ ಕೇಳಿದ್ದರು.

ಅದಕ್ಕುತ್ತರಿಸಿದ ಸಚಿವರು ರಾಜ್ಯದಲ್ಲಿ ಅಂತಹ 48 ಸ್ಥಳೀಯ ಸಂಸ್ಥೆಗಳಿದ್ದು, 2023-24ನೇ ಸಾಲಿನಲ್ಲಿ ಒಟ್ಟು 6202 ಲಕ್ಷ ರು. ಅನುದಾನ ಬಾಕಿ ಇದೆ. ಚುನಾಯಿತ ಸದಸ್ಯರು ಇಲ್ಲದೆ ಇರುವ ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ಅನುದಾನ ಬಿಡುಗಡೆ ಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಕೋರುವ ಪ್ರಸ್ತಾಪವು ಪರಿಶೀಲನೆಯ ಹಂತದಲ್ಲಿದೆ ಎಂದು ಸಚಿವರು ಉತ್ತರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ