ರೈತ ಸಮುದಾಯಕ್ಕೆ ವರದಾನವಾದ ಹೈನುಗಾರಿಕೆ

KannadaprabhaNewsNetwork |  
Published : Oct 20, 2025, 01:02 AM IST
ಪೋಟೋ೧೯ಸಿಎಲ್‌ಕೆ೩ ಚಳ್ಳಕೆರೆ ನಗರದ ಕೊರಿಯನ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾದ್ಯಂತ ಪ್ರತಿನಿತ್ಯ 2.40 ಲಕ್ಷ ಲೀಟರ್ ಹಾಲು ಉತ್ಪಾದನೆ: ಬಿ.ಸಿ.ಸಂಜೀವಮೂರ್ತಿ

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಚಿತ್ರದುರ್ಗ ಜಿಲ್ಲಾದ್ಯಂತ ಪ್ರತಿನಿತ್ಯ ಸುಮಾರು 2.40 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು ಜಿಲ್ಲಾದ್ಯಂತ 380 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಶಿವಮೊಗ್ಗ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ತಿಳಿಸಿದರು.

ಭಾನುವಾರ ಶಿವಮೊಗ್ಗ ಹಾಲು ಒಕ್ಕೂಟದ ಕೊರಿಯನ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ರೈತರು, ಮಾರುಕಟ್ಟೆ ವಿಭಾಗದ ಅಧಿಕಾರಿಗಳಿಗೆ ಶುಭಾಶಯ ತಿಳಿಸಿದ ಅವರು, ಚಳ್ಳಕೆರೆ ತಾಲೂಕಿನಲ್ಲಿ ಹಾಲು ಉತ್ಪಾಕರ ಸಹಕಾರ ಸಂಘಗಳು ಗಣಿನೀಯವಾಗಿ ಏರಿಕೆಯಾಗುತ್ತಿದೆಯಲ್ಲದೆ, ಹೊಸದಾಗಿ ಎಚ್‌ಪಿಪಿಸಿ ಕಾಲೇಜು ಮುಂಭಾಗ ಮತ್ತು ನಾಯಕನಹಟ್ಟಿ ರಸ್ತೆ ನೂತನ ನಂದಿನಿ ಪಾರ್ಲರ್‌ಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಇತ್ತೀಚೆಗೆ ತಾನೇ ಶಿವಮೊಗ್ಗ ಹಾಲು ಒಕ್ಕೂಟ ಹೊಸದಾಗಿ ನಂದಿನಿ ಸಿಹಿತಿ ನಿಸು ಸಿದ್ಧಪಡಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಒಟ್ಟಾರೆ ಜಿಲ್ಲೆಯಲ್ಲಿ ಶಿವಮೊಗ್ಗ ಹಾಲುಒಕ್ಕೂಟ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಈ ವೇಳೆ ಶಿವಮೊಗ್ಗ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಇರ್ಫಾನ್, ಸಿಬ್ಬಂದಿ ಅಭಿಷೇಕ್, ಸುರೇಶ್‌ಬಾಬು, ಅಭಿ, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ