ಹೈನುಗಾರಿಕೆ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕ

KannadaprabhaNewsNetwork |  
Published : Sep 02, 2025, 01:00 AM IST
01 | Kannada Prabha

ಸಾರಾಂಶ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಜೀವನಾಧಾರಿತ ಉಪ ಕಸುಬುಗಳಾದ ಹೈನುಗಾರಿಕೆ ಮತ್ತು ರೇಷ್ಮೆ ಕೃಷಿ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಜೀವನಾಧಾರಿತ ಉಪ ಕಸುಬುಗಳಾದ ಹೈನುಗಾರಿಕೆ ಮತ್ತು ರೇಷ್ಮೆ ಕೃಷಿ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ತಾಲುಕಿನ ಕಸಬಾ ಹೋಬಳಿಯ ಬೊಮ್ಮವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ನಿರ್ಮಿಸಿರುವ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಹಾಲು ಉತ್ಪಾಹಕರು ಡೈರಿಗಳಿಗೆ ಗುಣಮಟ್ಟದ ಹಾಲನ್ನು ಪೂರೈಸಬೇಕು. ಹೈನುಗಾರಿಕೆಗೆ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಸದ್ಬಳಸಿಕೊಂಡು ಆರ್ಥಿಕ ಅಭಿವೃದ್ಧಿಯತ್ತ ಸಾಗಬೇಕು ಎಂದು ಹೇಳಿದರು.

ರೈತರು ಭೂಮಿ ಕೊಡಲು ವಿಳಂಬ ಮಾಡಿದ್ದರಿಂದ ಎತ್ತಿನ ಹೊಳೆ ಯೋಜನೆ ಕಾಮಗಾರಿ ವಿಳಂಬವಾಗಿದ್ದು, ಒಂದೂವರೆ ವರ್ಷದಲ್ಲಿ ಎತ್ತಿನಹೊಳೆ ನೀರು ಸಿಗಲಿದೆ. ಜೊತೆಗೆ ಎಚ್.ಎನ್.ವ್ಯಾಲಿ ನೀರು ಹೆಚ್ಳಳ ಮಾಡಿ ಅಂತರ್ಜಲ ವೃದ್ಧಿಗೆ ಸಹಕರಿಸಲಾಗುವುದು. ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ತಾಲೂಕಿನಲ್ಲಿ ಯುವಜನರ ನಿರುದ್ಯೋಗ ನಿವಾರಣೆ ಸೇರಿದಂತೆ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದರು.

ಡೈರಿ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಬೊಮ್ಮವಾರ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಬಮೂಲ್‌ ೪.೫೦ ಲಕ್ಷ , ಕೆಎಂಎಫ್ ೪.೫೦ ಲಕ್ಷ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ೨ ಲಕ್ಷ ಹಾಗೂ ದಾನಿಗಳಿಂದ ೩ ಲಕ್ಷ ಧನಸಹಾಯ ಸೇರಿ ಒಟ್ಟು ೧೪ ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಗೊಂಡಿದೆ. ಇದು ಸಂಘದ ಪ್ರಗತಿಯ ಸಂಕೇತ ಎಂದು ಹೇಳಿದರು.

ಬಮೂಲ್ ನಿದೇರ್ಶಕ ಎಸ್.ಪಿ.ಮುನಿರಾಜು ಮಾತನಾಡಿ, ಬಮೂಲ್‌ ಸದೃಢವಾಗಿದೆ. ಪ್ರತಿದಿನ ೯೬ ಸಾವಿರ ಲೀಟರ್ ಹಾಲು ಪೂರೈಸುತ್ತಿದ್ದೀರಿ. ಮೊದಲು ೧.೫ ಲಕ್ಷ ಲೀಟರ್‌ ಸಂಗ್ರಹವಾಗುತ್ತಿತ್ತು. ಈಗ ಇಂಡಿ, ಬೂಸಾ ಬೆಲೆ ಹೆಚ್ಚಳದಿಂದ ಹೈನುಗಾರಿಕೆ ಮಾಡಲು ಕಷ್ಟಕರವಾಗಿದೆ. ೨೫ರಿಂದ ೫೦ ಸಾವಿರವಾಗುವ ಮಿಲ್ಕಿ ಮಿಷಿನ್, ಚಾಪ್ ಕಟರ್ ಮುಂತಾದ ಸೌಲಭ್ಯಗಳನ್ನು ರಿಯಾಯತಿ ದರದಲ್ಲಿ ಕೊಡಿಸಲು ಸಚಿವರು ಸಹಕರಸಬೇಕು. ಒಕ್ಕೂಟದಲ್ಲಿ ಬ್ಯಾಂಕ್ ವ್ಯವಸ್ಥೆ ಇಲ್ಲದಿರುವುದರಿಂದ ಬಿಡಿಸಿಸಿ ಬ್ಯಾಂಕ್ ನಲ್ಲಿ ನೂರು ಕೋಟಿ ಠೇವಣಿ ಇಟ್ಟು ಸಹಕಾರ ಸಂಘಗಳಿಂದ ಹಾಲು ಉತ್ಪಾದಕರಿಗೆ ಸಾಲ ಕೊಡಿಸಲು ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್ ಮುಂದಾಗಿದ್ದಾರೆ. ಇಲ್ಲಿ ನೀವು ಶಿಪಾರಸು ಮಾಡಿದ ಹೈನುಗಾರರಿಗೆ ಶೇ. ೩ರಷ್ಟು ವಾರ್ಷಿಕ ಬಡ್ಡಿದರದಲ್ಲಿ ಸಾಲ ಸಿಗಲಿದೆ. ಹಾಲು ಉತ್ಪಾದಕರ ಮಕ್ಕಳಿಗೆ ಶೇ.೩೦ರಷ್ಟು, ಸಿಬ್ಬಂದಿ ಮಕ್ಕಳಿಗೆ ಶೇ.೫ರಷ್ಟು, ಅಧಿಕಾರಿಗಳ ಮಕ್ಕಳಿಗೆ ಶೇ.೫ರಷ್ಟು ಬಮೂಲ್ ನಲ್ಲಿ ಉದ್ಯೋಗ ಮೀಸಲಿಗೆ ಸುರೇಶ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸಮಾರಂಭದಲ್ಲಿ ಬಯಪ ನಿರ್ದೇಶಕರಾದ ಸಿ.ಪ್ರಸನ್ನಕುಮಾರ್, ಮಂಜುನಾಥ್, ಗ್ರಾಪಂ ಅಧ್ಯಕ್ಷೆ ವೆಂಕಟಮ್ಮ , ಸದಸ್ಯ ನರಸಿಂಹರಾಜು, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಬಿ.ರಾಜಣ್ಣ, ತಾಲುಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸಿ.ಜಗನ್ನಾಥ್ ಅಧ್ಯಕ್ಷ ರವಿಕುಮಾರ್, ಮಾಜಿ ಅಧ್ಯಕ್ಷ ಸೋಮಶೇಖರ್, ದಿನಕರ್, ಸುಂದರೇಶ್, ರಮೇಶ್, ಉಪಾಧ್ಯಕ್ಷೆ ಶಕುಂತಲಮ್ಮ, ನಿದೇರ್ಶಕರುಗಳಾದ ನರಸಿಂಹಪ್ಪ, ಮುನಿನಾರಾಯಣಪ್ಪ, ರವಿಕುಮಾರ್, ಅಚ್ಚಪ್ಪ, ಬಿ.ಎನ್.ನಾರಾಯಣಪ್ಪ, ದ್ಯಾವಮ್ಮ, ಭಾಗ್ಯಮ್ಮ, ಮುನಿನಾರಾಯಣಪ್ಪ, ಎಸ್.ರಾಮಾಂಜಿನಪ್ಪ, ನಂಜೇಗೌಡ, ಬಿ.ಎಚ್. ನಾರಾಯಣಸ್ವಾಮಿ, ಸಿಇಒ ಅಶ್ವತ್ಥಪ್ಪ, ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಅಧ್ಯಕ್ಷ ಲೋಕೇಶ್ ಇತರರು ಉಪಸ್ಥಿತರಿದ್ದರು.

೦೧ ದೇವನಹಳ್ಳಿ ಚಿತ್ರಸುದ್ದಿ: ೦೨

ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಸಚಿವ ಕೆ.ಎಚ್.ಮುನಿಯಪ್ಪ ಉದ್ಘಾಟಿಸಿದರು. ಡೈರಿ ಅಧ್ಯಕ್ಷ ರವಿಕುಮಾರ್, ಬಮೂಲ್ ನಿದೇರ್ಶಕ ಎಸ್.ಪಿ.ಮುನಿರಾಜು ಇತರರು ಉಪಸ್ಥಿತಿರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಕ್ಯಾಲಿಗ್ರಫಿಗೆ ಲಭಿಸಿದ ಅಂತಾರಾಷ್ಟ್ರೀಯ ಪ್ರಶಸ್ತಿ
569 ಲೈಸೆನ್ಸ್‌ ಇ-ಹರಾಜಿಗೆ ಮುಂದಾದ ಅಬಕಾರಿ ಇಲಾಖೆ