ದ.ಕ. ಜಿಲ್ಲಾ ಟೂರಿಸ್ಟ್ ಕಾರು, ವ್ಯಾನ್ ಚಾಲಕ ಮಾಲಕರ ಸಂಘ ಪ್ರತಿಭಟನೆ

KannadaprabhaNewsNetwork |  
Published : Mar 13, 2024, 02:02 AM IST
ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನ್ ಚಾಲಕ ಮಾಲಕರ ಸಂಘದಿಂದ ಪ್ರತಿಭಟನೆ | Kannada Prabha

ಸಾರಾಂಶ

ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು.

ಬಂಟ್ವಾಳ: ಚುನಾವಣಾ ವಾಹನವಾಗಿ ಬಳಸಲಾಗುವ ಟೂರಿಸ್ಟ್ ಕಾರು, ವ್ಯಾನ್‌ಗಳಿಗೆ 2023ರ ವಿಧಾನಸಭಾ ಚುನಾವಣೆಯ ಸಂದರ್ಭ ನೀಡಬೇಕಾಗಿದ್ದ ಬಾಡಿಗೆಯನ್ನು ಇನ್ನೂ ನೀಡಿಲ್ಲ ಎಂದು ಆರೋಪಿಸಿ ಬಂಟ್ವಾಳದ ಆಡಳಿತ ಸೌಧದ ಮುಂಭಾಗ ಟೂರಿಸ್ಟ್ ಕಾರು, ವ್ಯಾನು ಚಾಲಕ, ಮಾಲಕರ ಸಂಘದ ಪದಾಧಿಕಾರಿಗಳು, ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಬಳಿಕ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ವ್ಯಾನ್‌ ಚಾಲಕ ಮಾಲಕರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಸದಾನಂದ ನಾವೂರು, ಈಗಾಗಲೇ ಹಲವು ಬಾರಿ ಮನವಿಯನ್ನು ಸಂಬಂಧಪಟ್ಟವರಿಗೆ ನೀಡಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಇದೇ ರೀತಿ ಮಾಡಿದರೆ, ಒತ್ತಾಯಪೂರ್ವಕವಾಗಿ ವಾಹನಗಳನ್ನು ಸೀಜ್ ಮಾಡಿದರೆ, ವಾಹನಗಳನ್ನು ಕಚೇರಿಯ ಬಳಿ ಇಟ್ಟು ನಾವು ಮರಳುತ್ತೇವೆ. ಈ ಬಾರಿ ವಾಹನಗಳನ್ನು ಬಾಡಿಗೆಗೆ ಪಡೆಯುವ ಸಂದರ್ಭ ಮೊದಲೇ ಎಷ್ಟು ಪಾವತಿ ಎಂಬುದನ್ನು ನಿಗದಿಪಡಿಸಿಕೊಳ್ಳಬೇಕು, ಇಲ್ಲವಾದರೆ ನಾವು ಮೋಸ ಹೋಗಬಹುದು ಎಂದರು.

ಈ ಬಾರಿ ಮೊದಲೇ ಪಾವತಿಯ ಗ್ಯಾರಂಟಿ ಕೊಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕಳೆದ 2023ರ ವಿಧಾನಸಭಾ ಚುನಾವಣೆಗೆ ವಿವಿಧ ಇಲಾಖೆಗಳಿಗೆ ನಮ್ಮ ಟೂರಿಸ್ಟ್ ವಾಹನಗಳಲ್ಲಿ ವಶಪಡಿಸಿ, ಸರಕಾರದ ಆದೇಶ ಪ್ರಕಾರ ಪಾವತಿ ನೀಡುವುದಾಗಿ ತಿಳಿಸಿದ್ದಾರೆ. ಕಾರಿಗೆ 2700 ರು., ವ್ಯಾನು 3800, ಮಿನಿ ಬಸ್ 8,200 ರು. ನೀಡುವುದಾಗಿ ತಿಳಿಸಿದ್ದರು. ಆದರೆ ಹೇಳಿದ ಪ್ರಕಾರ, ಕಾರ್ಯನಿರ್ವಹಿಸಿದ ಎಲ್ಲ ಚಾಲಕರಿಗೆ ಬಾಡಿಗೆ ನೀಡದೆ ತೊಂದರೆ ಉಂಟುಮಾಡಿದೆ ಎಂದು ಆರೋಪಿಸಿದರು.

ಈ ಸಂದರ್ಭ ಟೂರಿಸ್ಟ್ ಕಾರು ಚಾಲಕ ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್, ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಶನ್ ಗೌರವಾಧ್ಯಕ್ಷ ಇಕ್ಬಾಲ್ ಬಿ.ಸಿ.ರೋಡ್, ಪ್ರಮುಖರಾದ ವಿನ್ಸೆಂಟ್ ರೋಡ್ರಿಗಸ್, ಸುನಿಲ್ ಲೋಬೊ, ವಿಠಲ ರೈ, ಸುರೇಶ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ