ವಿದ್ಯಾರ್ಥಿಗಳಿಗೆ ಆ್ಯಂಬುಲೆನ್ಸ್‌ಲ್ಲೇ ಡ್ರಗ್ಸ್‌ ಮಾರಾಟ - ಮಂಗಳೂರಲ್ಲಿ ಪ್ರಕರಣ ಪತ್ತೆ

Published : Jul 27, 2026, 05:49 AM IST
Drug

ಸಾರಾಂಶ

ತುರ್ತು ಚಿಕಿತ್ಸೆ ಅಗತ್ಯವಿರುವರ ಜೀವ ಕಾಪಾಡಲು ಬಳಸುವ ಆ್ಯಂಬುಲೆನ್ಸ್‌ನಲ್ಲಿಯೇ ಡ್ರಗ್ಸ್‌ ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆಘಾತಕಾರಿ ಪ್ರಕರಣವೊಂದನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಯಲಿಗೆಳೆದಿದ್ದಾರೆ.

ಮಂಗಳೂರು :  ತುರ್ತು ಚಿಕಿತ್ಸೆ ಅಗತ್ಯವಿರುವರ ಜೀವ ಕಾಪಾಡಲು ಬಳಸುವ ಆ್ಯಂಬುಲೆನ್ಸ್‌ನಲ್ಲಿಯೇ ಡ್ರಗ್ಸ್‌ ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆಘಾತಕಾರಿ ಪ್ರಕರಣವೊಂದನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಯಲಿಗೆಳೆದಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಲೇ ಆರೋಪಿ, ಆ್ಯಂಬುಲೆನ್ಸ್‌ ಚಾಲಕ ಬೆಳ್ತಂಗಡಿಯ ಜಲೀಲ್‌ ಬಾಬಾ ಎಂಬಾತ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಕರಣ ಬೆಳಕಿಗೆ:

ಸಿಸಿಬಿ ಪೊಲೀಸರು ಜೂ.25ರಂದು ಸುರತ್ಕಲ್‌ ಸಮೀಪದ ಕುಳಾಯಿಗುಡ್ಡೆ ಸಮೀಪ ಬಾಡಿಗೆ ಮನೆಯೊಂದರ ದಾಳಿ ನಡೆಸಿ ಅಣ್ಣಪ್ಪ ಸ್ವಾಮಿ ಎಂಬಾತನನ್ನು ಬಂಧಿಸಿ ಆತನಿಂದ ₹1.50 ಲಕ್ಷ ಮೌಲ್ಯದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಜಾಲದ ಬಗ್ಗೆ ಸುಳಿವು ಪಡೆದಿದ್ದರು. ಇದರ ಆಧಾರದಲ್ಲಿ ಜು.15ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಲಾಡ್ಜ್ ಮೇಲೆ ದಾಳಿ ನಡೆಸಿ ಮತ್ತೆ ಮೊಹಮ್ಮದ್ ಅಲ್ತಾಫ್, ಉಜಿರೆ ಹಳೆಪೇಟೆಯ ಮೊಹಮ್ಮದ್ ಮುಸ್ತಫಾರನ್ನು ಬಂಧಿಸಿದ್ದರು. ಅವರಿಂದ ಅಂದಾಜು ₹5.5 ಕೋಟಿ ಮೌಲ್ಯದ ಒಟ್ಟು 5 ಕೆ.ಜಿ ಎಂಡಿಎಂಎ, ಕಾರು, ಬ್ಯಾಗ್ ಮತ್ತು ಮೊಬೈಲ್ ಫೋನ್‌ ವಶಪಡಿಸಿಕೊಳ್ಳಲಾಗಿತ್ತು.

ಈ ಜಾಲದಲ್ಲಿ ಇನ್ನೂ ಹಲವರು ಭಾಗಿ ಆಗಿರುವ ಶಂಕೆ

ಈ ಜಾಲದಲ್ಲಿ ಇನ್ನೂ ಹಲವರು ಭಾಗಿ ಆಗಿರುವ ಶಂಕೆಯಲ್ಲಿ, ತನಿಖೆ ಮುಂದುವರಿದಿತ್ತು. ಪೊಲೀಸ್ ವಿಚಾರಣೆಯ ವೇಳೆ ಆರೋಪಿಗಳು ಜಲೀಲ್ ಬಾಬಾನ ಬಗ್ಗೆ ಮಾಹಿತಿ ನೀಡಿದ್ದಾರೆ. ಈತ ತನ್ನ ಖಾಸಗಿ ಆ್ಯಂಬುಲೆನ್ಸ್‌ನಲ್ಲಿಯೇ ಡ್ರಗ್ಸ್‌ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ. ಡ್ರಗ್ಸ್‌ ಖರೀದಿಗೆ ಹೋಗಿದ್ದ ಮೂವರು ಆರೋಪಿಗಳ ಜೊತೆ ನೇರ ನಂಟು ಹೊಂದಿದ್ದ. ತಂದ ಮಾಲನ್ನು ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿ ಮಾರಾಟ ಮಾಡುತ್ತಿದ್ದುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಆರೋಪಿಸಲಾಗಿದೆ.

PREV
Get the latest news from Dakshina Kannada (ದಕ್ಷಿಣ ಕನ್ನಡ ಸುದ್ದಿ) — covering coastal city Mangaluru, local governance, beaches & tourism, culture & traditions (Yakshagana, Kambala), education, industry and agriculture, environment, civic issues, and community events from the district on Kannada Prabha News.
Read more Articles on

Recommended Stories

ದೇಶದೊಳಗಿನ ಶತ್ರುಗಳ ಬಗ್ಗೆ ಎಚ್ಚರ ವಹಿಸೋಣ: ಜಿತಕಾಮಾನಂದಜೀ
ರಾ ಹೆದ್ದಾರಿ ೭೫ರ ಅಗಲೀಕರಣ ಕಾಮಗಾರಿ ಸರ್ವಿಸ್ ರಸ್ತೆ ನಿರ್ಮಾಣ ಅಧ್ವಾನ