ಜಾಲತಾಣದಲ್ಲಿ ಅತಿರೇಕದ ಹೇಳಿಕೆ : ಮಟ್ಟೆಣ್ಣನವರ್, ತಿಮ್ಮರೋಡಿ ವಿರುದ್ಧ ಕೇಸ್‌

Published : Aug 08, 2025, 06:54 AM IST
dharmasthala

ಸಾರಾಂಶ

ಫೇಸ್‌ಬುಕ್‌ ಸೇರಿದಂತೆ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಆರೋಪಿಸಿ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಳ್ತಂಗಡಿ: ಫೇಸ್‌ಬುಕ್‌ ಸೇರಿದಂತೆ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಆರೋಪಿಸಿ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. 

ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ದೂರು ನೀಡಿದ್ದಾರೆ. ಮಟ್ಟಣ್ಣವ‌ರ್ ಅವರು ಅಪರಾಧಿಕ ಕೃತ್ಯ ನಡೆಸಲು, ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿರುವ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಪ್ರಸಾರ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಚರಣ್ ಶೆಟ್ಟಿ ಅವರು ಮಹೇಶ್ ತಿಮರೋಡಿ ವಿರುದ್ಧ ದೂರು ನೀಡಿದ್ದಾರೆ. 

ತಿಮರೋಡಿ ಅವರು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್‌ನಲ್ಲಿ ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕರಲ್ಲಿ ಭೀತಿ ಉಂಟಾಗುವಂತೆ ಅಪಾಯಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

PREV
Get the latest news from Dakshina Kannada (ದಕ್ಷಿಣ ಕನ್ನಡ ಸುದ್ದಿ) — covering coastal city Mangaluru, local governance, beaches & tourism, culture & traditions (Yakshagana, Kambala), education, industry and agriculture, environment, civic issues, and community events from the district on Kannada Prabha News.
Read more Articles on

Recommended Stories

ನೆಲ್ಲಿಕಟ್ಟೆ ಉದ್ಯಾನವನ: ಬೃಹತ್ ರಾಷ್ಟ್ರಧ್ವಜಸ್ತಂಭ ಶಿಲಾನ್ಯಾಸ
ಪತ್ರಕರ್ತೆ ಪ್ರೇಮಶ್ರೀ, ಉದ್ಯಮಿ ಶಾಂತಲಾಗೆ ‘ಚೌಟರಾಣಿ ಅಬ್ಬಕ್ಕ ಪ್ರೇರಣಾ ಪತ್ರ