ಧರ್ಮಸ್ಥಳ ಗ್ರಾಮದಲ್ಲಿ ಕಳೇಬರ ಸಿಗದಿದ್ರೆ ಮುಸುಕುಧಾರಿ ಲೋಪವಲ್ಲ

Published : Aug 10, 2025, 11:35 AM IST
dharmasthala case

ಸಾರಾಂಶ

ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿದ ಉತ್ಖನನ ಪ್ರಕ್ರಿಯೆ ವೇಳೆ ಬಾಹುಬಲಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅಗೆತ ಕಾರ್ಯಾಚರಣೆಯಲ್ಲಿ ಕಳೇಬರ ಪತ್ತೆಯಾಗದಿದ್ದರೆ ಅದು ಮುಸುಕುಧಾರಿ ಅನಾಮಿಕ ದೂರುದಾರನ ತಪ್ಪಲ್ಲ ಎಂದು ದೂರುದಾರೆ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಹೇಳಿದ್ದಾರೆ.

  ಬೆಳ್ತಂಗಡಿ :  ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿದ ಉತ್ಖನನ ಪ್ರಕ್ರಿಯೆ ವೇಳೆ ಬಾಹುಬಲಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅಗೆತ ಕಾರ್ಯಾಚರಣೆಯಲ್ಲಿ ಕಳೇಬರ ಪತ್ತೆಯಾಗದಿದ್ದರೆ ಅದು ಮುಸುಕುಧಾರಿ ಅನಾಮಿಕ ದೂರುದಾರನ ತಪ್ಪಲ್ಲ ಎಂದು ದೂರುದಾರೆ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಹೇಳಿದ್ದಾರೆ.

ಶನಿವಾರ ಬಾಹುಬಲಿ ಬೆಟ್ಟದ ತಪ್ಪಲಿನಲ್ಲಿ ನಡೆದ ಉತ್ಖನನ ಕಾರ್ಯದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದರು. ಇಲ್ಲಿ ಹೊಸ ಮಣ್ಣು ಕಂಡು ಬಂದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಮಂಜುನಾಥ್‌, ಯಾರೋ ಒಳಸಂಚು ನಡೆಸಿ, ಬಾಹುಬಲಿ ಬೆಟ್ಟದ ತಪ್ಪಲಿನ ಅರಣ್ಯ ಪ್ರದೇಶದಲ್ಲಿ ಬೇಕಂತಲೇ ಹೊಸ ಮಣ್ಣು ಸುರಿದಿದ್ದಾರೆ. 

ಸತ್ಯವನ್ನು ಮರೆಮಾಚಲೆಂದು ಕೆಲವು ಹಿತಾಸಕ್ತಿಗಳು ಬೇಕಂತಲೇ ಸಾಕ್ಷಿ ನಾಶದಲ್ಲಿ ತೊಡಗಿರುವಂತೆ ಕಾಣುತ್ತಿದೆ. ಬಾಹುಬಲಿ ಬೆಟ್ಟದ ತಪ್ಪಲಿನ ಅರಣ್ಯ ಪ್ರದೇಶದಲ್ಲಿ ಸಾಕ್ಷಿ ಸಿಗದಿರಲೆಂದೇ ಸುಮಾರು 10 ಅಡಿಯಷ್ಟು ಹೊಸಮಣ್ಣು ಮತ್ತು ತ್ಯಾಜ್ಯವನ್ನು ಸುರಿದಿರುವಂತೆ ಕಾಣುತ್ತಿದೆ. ಎಸ್‌ಐಟಿ ತನಿಖೆಗೆ ಅಡ್ಡಿಪಡಿಸಲೆಂದೇ ಕೆಲವು ವ್ಯಕ್ತಿಗಳು ಇಂತಹ ಹೇಯ ಕೃತ್ಯ ನಡೆಸಿರುವಂತೆ ಕಾಣುತ್ತಿದೆ. ಆದರೆ, ಎಸ್‌ಐಟಿ, ಈ ಒಳಸಂಚನ್ನು ಭೇದಿಸುವುದೆಂಬ ವಿಶ್ವಾಸವಿದೆ ಎಂದರು.

PREV
Get the latest news from Dakshina Kannada (ದಕ್ಷಿಣ ಕನ್ನಡ ಸುದ್ದಿ) — covering coastal city Mangaluru, local governance, beaches & tourism, culture & traditions (Yakshagana, Kambala), education, industry and agriculture, environment, civic issues, and community events from the district on Kannada Prabha News.
Read more Articles on

Recommended Stories

ನೆಲ್ಲಿಕಟ್ಟೆ ಉದ್ಯಾನವನ: ಬೃಹತ್ ರಾಷ್ಟ್ರಧ್ವಜಸ್ತಂಭ ಶಿಲಾನ್ಯಾಸ
ಪತ್ರಕರ್ತೆ ಪ್ರೇಮಶ್ರೀ, ಉದ್ಯಮಿ ಶಾಂತಲಾಗೆ ‘ಚೌಟರಾಣಿ ಅಬ್ಬಕ್ಕ ಪ್ರೇರಣಾ ಪತ್ರ