ಕುವೆಂಪು ಸದ್ಭಾವನಾ ಪ್ರಶಸ್ತಿಗೆ ಭಾಜನರಾದ ಶ್ರೀ ಶ್ಯಾಮ್ ಸುಂದರ್ ಹೆಗ್ಡೆ

Published : Jan 17, 2026, 02:34 PM IST
shamasundar hegde

ಸಾರಾಂಶ

ನವ ವರ್ಷದ ಆರಂಭದಲ್ಲೇ ಸಮಾಜಸೇವಾ ಕ್ಷೇತ್ರದಲ್ಲಿ ತಮ್ಮ ನಿರಂತರ, ನಿಷ್ಠಾವಂತ ಹಾಗೂ ಮೌಲ್ಯಾಧಾರಿತ ಸೇವೆಗೆ ಗುರುತಾಗಿ ಶ್ರೀ ಶ್ಯಾಮ್ ಸುಂದರ್ ಹೆಗ್ಡೆ ಅವರಿಗೆ ಪ್ರತಿಷ್ಠಿತ ಕುವೆಂಪು ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು :  ನವ ವರ್ಷದ ಆರಂಭದಲ್ಲೇ ಸಮಾಜಸೇವಾ ಕ್ಷೇತ್ರದಲ್ಲಿ ತಮ್ಮ ನಿರಂತರ, ನಿಷ್ಠಾವಂತ ಹಾಗೂ ಮೌಲ್ಯಾಧಾರಿತ ಸೇವೆಗೆ ಗುರುತಾಗಿ ಶ್ರೀ ಶ್ಯಾಮ್ ಸುಂದರ್ ಹೆಗ್ಡೆ ಅವರಿಗೆ ಪ್ರತಿಷ್ಠಿತ ಕುವೆಂಪು ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಗೌರವ ಸಮಾರಂಭವು ನಯನ ಸಭಾಂಗಣದಲ್ಲಿ ಎಸ್.ಎಸ್. ಕಲಾ ಸಂಗಮ ಟ್ರಸ್ಟ್‌ನ ವತಿಯಿಂದ ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಎಸ್.ಎಸ್. ಕಲಾ ಸಂಗಮದ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಶ್ರೀ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಹಿತ್ಯ, ಸಂಸ್ಕೃತಿ ಮತ್ತು ಸದ್ಭಾವನೆಯ ಮಹತ್ವವನ್ನು ಪ್ರತಿಬಿಂಬಿಸುವ ಅತ್ಯಂತ ಅರ್ಥಪೂರ್ಣ ವೇದಿಕೆಯಾಗಿ ಮೂಡಿಬಂದಿತು.

ಕುವೆಂಪು ಸದ್ಭಾವನಾ ಪ್ರಶಸ್ತಿಗೆ ಶ್ರೀ ಶ್ಯಾಮ್ ಸುಂದರ್ ಹೆಗ್ಡೆ ಆಯ್ಕೆ

ಸಮಾಜದಲ್ಲಿ ಮಾನವೀಯ ಮೌಲ್ಯಗಳು ಮತ್ತು ಸಾಂಸ್ಕೃತಿಕ ಚಿಂತನೆಗಳನ್ನು ಬೆಳೆಸುವ ಉದ್ದೇಶದಿಂದ ನೀಡಲಾಗುವ ಕುವೆಂಪು ಸದ್ಭಾವನಾ ಪ್ರಶಸ್ತಿಗೆ ಶ್ರೀ ಶ್ಯಾಮ್ ಸುಂದರ್ ಹೆಗ್ಡೆ ಆಯ್ಕೆಯಾಗಿರುವುದು ಅವರ ಸಮಾಜಮುಖಿ ಕಾರ್ಯಗಳ ಮಹತ್ವವನ್ನು ಸಾರುತ್ತದೆ. ಈ ಪ್ರಶಸ್ತಿ ತನ್ನ ಮನಸ್ಸಿಗೆ ಅಪಾರ ಸಂತೋಷ ನೀಡಿದ್ದು, ಜೊತೆಗೆ ಇನ್ನಷ್ಟು ಜವಾಬ್ದಾರಿಯುತವಾಗಿ ಕೆಲಸ ಮಾಡುವ ಪ್ರೇರಣೆಯನ್ನು ನೀಡಿದೆ ಎಂದು ಶ್ರೀ ಶ್ಯಾಮ್ ಸುಂದರ್ ಹೆಗ್ಡೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

“ನನ್ನ ಕೆಲಸ ಇನ್ನೂ ಹೆಚ್ಚು ಜನರಿಗೆ ತಲುಪಬೇಕು. ಸಮಾಜಕ್ಕೆ ಉಪಯುಕ್ತವಾಗುವ ಕಾರ್ಯಗಳನ್ನು ಇನ್ನೂ ಶ್ರದ್ಧೆಯಿಂದ ಮುಂದುವರೆಸುವ ಸಂಕಲ್ಪ ನನ್ನದು” ಎಂದು ಅವರು ಹೇಳಿದರು.

ಈ ಸಮಾರಂಭದಲ್ಲಿ ಹಿರಿಯ ರಾಜಕಾರಣಿ ಬಿ.ಟಿ. ಲಲಿತಾ ನಾಯಕ್, ಖ್ಯಾತ ಗಾಯಕ ಹಾಗೂ ನಟ ಶಶಿಧರ ಕೋಟೆ, ಹಿರಿಯ ನಟಿ ಗಿರಿಜಾ ಲೋಕೇಶ್, ಡಾ. ಸಂಗೀತಾ ಹೊಳ್ಳ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.

ಗಣ್ಯರ ಸಮ್ಮುಖದಲ್ಲಿ  ಗೌರವ

ಗಣ್ಯರ ಸಮ್ಮುಖದಲ್ಲಿ ಈ ಗೌರವ ಲಭಿಸಿರುವುದು ತಮ್ಮ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ ಎಂದು ಅವರು ತಿಳಿಸಿದರು.

ತಮ್ಮನ್ನು ಗುರುತಿಸಿ ಗೌರವಿಸಿದ ಎಸ್.ಎಸ್. ಕಲಾ ಸಂಗಮ ಟ್ರಸ್ಟ್, ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಶ್ರೀ ಶಿವಕುಮಾರ್, ಕಾರ್ಯಕ್ರಮದ ಆಯೋಜಕರು, ಸಹಕರಿಸಿದ ಗಣ್ಯರು ಹಾಗೂ ಸದಾ ಬೆಂಬಲವಾಗಿ ನಿಂತಿರುವ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಶ್ರೀ ಶ್ಯಾಮ್ ಸುಂದರ್ ಹೆಗ್ಡೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

PREV
Get the latest news from Dakshina Kannada (ದಕ್ಷಿಣ ಕನ್ನಡ ಸುದ್ದಿ) — covering coastal city Mangaluru, local governance, beaches & tourism, culture & traditions (Yakshagana, Kambala), education, industry and agriculture, environment, civic issues, and community events from the district on Kannada Prabha News.
Read more Articles on

Recommended Stories

ಮೂಡುಬಿದಿರೆ ಸಿಂಥೆಟಿಕ್ ಟ್ರ್ಯಾಕ್ ಗೆ 11 ವರ್ಷ ಕ್ರೀಡಾಭಿಮಾನಿಗಳ ಹರ್ಷ
ಯುಐ ಗ್ರೀನ್‌ ಮೆಟ್ರಿಕ್‌ ಶ್ರೇಯಾಂಕ: ಮಂಗಳೂರು ವಿವಿ ದೇಶದಲ್ಲಿ ನಂ.3