ಕನ್ನಡಪ್ರಭ ವಾರ್ತೆ ಹಲಗೂರು
ಅದರಲ್ಲಿ ಪ್ರಥಮ ಸ್ಥಾನವನ್ನು ಹಲಗೂರು ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿ ಆರ್.ಹಿತೇಶ್, ದ್ವಿತೀಯ ಸ್ಥಾನವನ್ನು ಎಸ್.ಜಿ.ಕಾನ್ವೆಂಟ್ ವಿದ್ಯಾರ್ಥಿ ಸುದೀಕ್ಷ , ತೃತೀಯ ಸ್ಥಾನವನ್ನು ಜೆ.ಜೆ.ಪಬ್ಲಿಕ್ ಶಾಲೆಯ ಭಾನುಪ್ರಿಯ ಪಡೆದುಕೊಂಡರು. ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿದರೆ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ನೆನಪಿನ ಕಾಣಿಕೆ ನೀಡಲಾಯಿತು.
ಬೆಳಗ್ಗೆ ಶ್ರೀರಾಧಾಕೃಷ್ಣನ ಮೂರ್ತಿಗೆ ಹಾಲಿನ ಅಭಿಷೇಕ, ಪಂಚಾಮೃತ ಅಭಿಷೇಕ ನಡೆಸಲಾಯಿತು. ನಂತರ ಮಂದಿರದ ಹಿಂಭಾಗ ಇರುವ ಕೊಳದಲ್ಲಿ ತೆಪ್ಪೋತ್ಸವ ನಡೆಸಲಾಯಿತು. ಪಲ್ಲಕ್ಕಿ ಸೇವೆ ನಡೆಸಿದ ನಂತರ ದೇವರ ಮೂರ್ತಿಗಳನ್ನು ತೊಟ್ಟಿಲಲ್ಲಿ ಮಲಗಿಸಿ ಉಯ್ಯಾಲೆ ಸೇವೆ ನಡೆಸಿ, ನಂತರ ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಮಾಡಿದ ಬಳಿಕ ಭಕ್ತಾದಿಗಳಿಗೆ ಮಹಾ ಮಂಗಳಾರತಿ, ಪ್ರಸಾದ ವಿನಯೋಗಿಸಲಾಯಿತು.ಗಾಯಕರಾದ ಶಿವಾರ ಉಮೇಶ್ ಮತ್ತು ತಂಡದವರಿಂದ ದಾಸವಾಣಿ ಭಕ್ತಿಗೀತೆಗಳನ್ನು ಹಮ್ಮಿಕೊಳ್ಳಲಾಗಿತ್ತು. ತೀರ್ಪುಗಾರರಾಗಿ ಜಿ.ಎಸ್. ಕೃಷ್ಣ , ಸಿದ್ದರಾಜು, ಸ್ನೇಹ ನೆಲ್ಲೂರು ಕರ್ತವ್ಯ ನಿರ್ವಹಿಸಿದರು
ವಿಶಿಷ್ಟ್ ಮಾಂಟೆಸ್ಸರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ
ಕನ್ನಡಪ್ರಭ ವಾರ್ತೆ ಮಂಡ್ಯನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ವಿಶಿಷ್ಟ್ ಮಾಂಟೆಸ್ಸರಿ ಶಾಲೆಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಶಾಲೆಯ ಮಕ್ಕಳು ರಾಧೆ ಹಾಗೂ ಕೃಷ್ಣನ ವೇಷದಲ್ಲಿ ಮುದ್ದು ಮುದ್ದಾಗಿ ಕಾಣುವ ಜೊತೆಗೆ ಎಲ್ಲರೂ ಶ್ರೀಕೃಷ್ಣನ ಭಜನೆ ಹಾಗೂ ಹಾಡುಗಳನ್ನು ಹಾಡಿ ಸಡಗರ-ಸಂಭ್ರಮದಿಂದ ಕುಣಿದು ಕುಪ್ಪಳಿಸಿದರು. ವಿದ್ಯಾ ಜ್ಯೋತಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಎಸ್.ಜೀವಿತಾ, ಶಿಕ್ಷಕಿಯರಾದ ಕೌಸಲ್ಯ, ಶಶಿ, ಹೇಮಾ ಹಾಗೂ ಸಹಾಯಕಿ ನಾಗರತ್ನ ಇತರರಿದ್ದರು.