ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ಗೆ ಹಿರೇಮಗಳೂರು ಸರ್ಕಲ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ದಲಿತ ಸಂಘಟನೆಗಳ ಪದಾಧಿಕಾರಿಗಳು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ, ಡಾ। ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂದು ಘೋಷಣೆ ಕೂಗಿದರು.
ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿಯಾಗಿ ಡಾ। ಜಿ.ಪರಮೇಶ್ವರ್ ಅವರನ್ನು ನೇಮಿಸಬೇಕು. ಚಿಕ್ಕಮಗಳೂರು ಕ್ಷೇತ್ರದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಗೆಲ್ಲಿಸಿದ್ದೇವೆ. ಡಾ। ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಲೇಬೇಕೆಂದು ಆಗ್ರಹಿಸಿದರು.----‘ಹೈ’ಗೆ ಬಿಟ್ಟ ವಿಚಾರ
ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ತೀರ್ಮಾನ ಮಾಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಇದರಲ್ಲಿ ಆಸೆ ಪ್ರಶ್ನೆ ಬರುವುದಿಲ್ಲ.-ಡಾ। ಜಿ.ಪರಮೇಶ್ವರ್, ಗೃಹ ಸಚಿವ.