ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಚರ್ಚೆ ನಡೆಯುತ್ತಿದೆ. ಜೊತೆಗೆ ಸಿದ್ದರಾಮಯ್ಯ ಅವರು ಬದಲಾವಣೆಯಾಗತ್ತಾರೆಂಬ ವ್ಯಾಪಕ ಚರ್ಚೆಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದಲಿತ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಪ್ರಭಾವಿ ವ್ಯಕ್ತಿಗಳು ರಾಜ್ಯದಲ್ಲಿ ಮಂತ್ರಿಗಳಾಗಿದ್ದರು. ಆದರೆ, ಈವರೆವಿಗೂ ದಲಿತ ವ್ಯಕ್ತಿಯೊಬ್ಬರಿಗೆ ಮುಖ್ಯಮಂತ್ರಿ ಸ್ಥಾನಮಾನ ನೀಡಲಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷಗಳ ಕಾಲ ಮುಂದುವರಿದಲ್ಲಿ ಯಾವುದೇ ಅಪಸ್ವರ ಇಲ್ಲ. ಆದರೆ, ಬದಲಾವಣೆಯಾದಲ್ಲಿ ದಲಿತರಿಗೆ ಸ್ಥಾನಮಾನ ನೀಡಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಪ್ರತಿಪಾದಿಸಿದರು.ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಆದರೆ, ಅವರನ್ನು ಮುಂದೆ ೨೦೨೮ರಲ್ಲಿ ಮುಖ್ಯಮಂತ್ರಿ ಮಾಡಲಿ, ಸದ್ಯ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಿದಲ್ಲಿ ತುಂಬಾ ಸಂತೋಷ, ಅವರನ್ನು ಹೊರತುಪಡಿಸಿದಂತೆ ಡಾ. ಜಿ. ಪರಮೇಶ್ವರ್, ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ ಅವರಲ್ಲಿ ಯಾರಾದರೊಬ್ಬರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿದರು.
ಅನುದಾನ ವಾಪಸ್ಸು ಕೊಡುವವರೆಗೂ ಹೋರಾಟ:
ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಸಚಿವರ ನಿವಾಸದ ಮುಂದೆ ಹೋರಾಟ ನಡೆಸಿದ್ದೇವೆ. ಈ ಅನುದಾನ ವಾಪಸ್ಸು ಬರುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಘೋಷಿಸಿದರು.