- ಸರಿಯಾದ ಸಮಯದಲ್ಲಿ ಹೈಕಮಾಂಡ್ ಸೂಕ್ತ ನಿರ್ಣಯ: ವಿಶ್ವಾಸ
ಕನ್ನಡಪ್ರಭ ವಾರ್ತೆ ದಾವಣಗೆರೆ
ದಲಿತ ಮುಖ್ಯಮಂತ್ರಿ ಮಾಡುವ ಅಧಿಕಾರ ಕಾಂಗ್ರೆಸ್ ಪಕ್ಷದಲ್ಲಿ ಈಗ ದಲಿತರ ಕೈಯಲ್ಲೇ ಇದೆ. ನಮ್ಮ ಪಕ್ಷಕ್ಕೆ ದಲಿತ ಹೈಕಮಾಂಡ್ ಇದೆ. ಸರಿಯಾದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ಹೈಕಮಾಂಡ್ ಕೈಗೊಳ್ಳಲಿದೆ. ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಯಾರು, ಯಾರ ತಲೆ ಮೇಲೆ ಕೈ ಇಟ್ಟು, ಆಣೆ ಮಾಡಿದ್ದಾರೋ ಗೊತ್ತಿಲ್ಲ. ಅದನ್ನು ನಾವ್ಯಾರೂ ನೋಡಿಯೂ ಇಲ್ಲ ಎಂದರು.
ದಕ್ಷಿಣ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುವುದಾ? ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲೇ ನಮಗೆ ಗೆಲ್ಲಿಸಲಿಲ್ಲ. ಅಂತಹದ್ದರಲ್ಲಿ ಸಾಮಾನ್ಯ ವರ್ಗದ ದಕ್ಷಿಣ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಾ? ಕಾಂಗ್ರೆಸ್ ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ ನಾವೆಲ್ಲರೂ ಕೆಲಸ ಮಾಡುತ್ತೇವೆ. ಮುಸ್ಲಿಮರು ಸೇರಿದಂತೆ ಯಾರನ್ನೂ ಕಾಂಗ್ರೆಸ್ ಪಕ್ಷ ಕಡೆಗಣಿಸಿಲ್ಲ, ಕಡೆಗಣಿಸುದೂ ಇಲ್ಲ ಎಂದು ಎಚ್.ಆಂಜನೇಯ ಸ್ಪಷ್ಟಪಡಿಸಿದರು.
- - -(ಪೋಟೋ: ಆಂಜನೇಯ)