ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಅರೆಬೆತ್ತಲೆ ಪ್ರತಿಭಟನೆ

KannadaprabhaNewsNetwork |  
Published : Nov 06, 2024, 11:48 PM IST
ಚಿತ್ರ :  6ಎಂಡಿಕೆ3 : ಲಿತ ಸಂಘರ್ಷ ಸಮಿತಿಯ  ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.  | Kannada Prabha

ಸಾರಾಂಶ

ಬಹುಮತ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಬುಧವಾರ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಬಹುಮತ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಬುಧವಾರ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾ ಕಚೇರಿ ವರೆಗೆ ತೆರಳಿದ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದರು.

ದಲಿತರು, ಹಿಂದುಳಿದ ವರ್ಗ, ಕಡು ಬಡವರು, ದುರ್ಬಲರು ಹಾಗೂ ಅಲ್ಪಸಂಖ್ಯಾತರ ಏಳಿಗೆಗಾಗಿ ಶ್ರಮಿಸುತ್ತಿರುವ ಸಿದ್ದರಾಮಯ್ಯ ದಕ್ಷ ಆಡಳಿತ ಸಹಿಸದೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿದೆ. ಕಾಂಗ್ರೆಸ್‌ ಸರ್ಕಾರ ಪತನಗೊಳಿಸಬೇಕೆನ್ನುವ ಏಕೈಕ ಉದ್ದೇಶದಿಂದ ಆಧಾರ ರಹಿತ ಹಗರಣಗಳನ್ನು ಬೀದಿಗೆ ತರಲಾಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಆ ಮೂಲಕ ಜನರ ಹಾದಿ ತಪ್ಪಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಸಮಿತಿ ಪ್ರಮುಖರು ಆರೋಪಿಸಿದರು.

ಸಮಿತಿ ಜಿಲ್ಲಾ ಸಂಚಾಲಕ ಎಂ.ಎನ್.ರಾಜಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ಎನ್.ಆರ್.ದೇವರಾಜ್, ಎಸ್.ಜೆ.ರಾಜಪ್ಪ, ಪ್ರಮುಖರಾದ ಶಿವಕುಮಾರ್, ದಯಾಕರ,

ವೀರಭದ್ರ, ಗಿರೀಶ್, ಚಂದ್ರಶೇಖರ್, ರಂಗಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ಷರ ದಾಸೋಹ ಸಿಬ್ಬಂದಿ ಸ್ವಚ್ಛತೆಗೆ ಆದ್ಯತೆ ನೀಡಲಿ: ಎ.ಎನ್. ಕಾಂಬೋಗಿ
ಹಂಪಿ ಉತ್ಸವದಲ್ಲಿ ಅತ್ಯಾಧುನಿಕ 1000 ಡ್ರೋನ್‌ ಶೋ