ದಲಿತ ಯುವಕನಿಗೆ ಪ್ರವೇಶ ನಿರಾಕರಣೆ

KannadaprabhaNewsNetwork |  
Published : May 11, 2025, 11:57 PM IST
ಮಧುಗಿರಿ ತಾಲೂಕು ಕವಣದಾಲ ಗ್ರಾಮದಲಲ್ಲಿ ದಲಿತ ಯುವಕ ಸ್ವಾಮಿನಾಥ್‌ ಪೂಜೆ ಮಾಡಿಸಲು ಒಳಗೆ ಹೋಗಿದ್ದಾಗ ಸವರ್ಣಿಯರು ತಡೆದು ಯುವಕನನ್ನು ನೀನು ದಲಿತ ಒಳಗೆ ಬರಬಾರದೆಂದು ಅವಮಾನ ಮಾಡಿರುವ ಘಟನೆ ನಡೆದಿದೆ.  | Kannada Prabha

ಸಾರಾಂಶ

ದಲಿತ ಯುವಕನಿಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ ಘಟನೆ ಶನಿವಾರ ತಾಲೂಕಿನ ಕವಣದಾಲ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ

ಕನ್ನಡಪ್ರಭ‍ ವಾರ್ತೆ ಮಧುಗಿರಿ

ದಲಿತ ಯುವಕನಿಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ ಘಟನೆ ಶನಿವಾರ ತಾಲೂಕಿನ ಕವಣದಾಲ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಶ್ರೀರಾಮಾಂಜನೇಯಸ್ವಾಮಿ ದೇಗುಲದಲ್ಲಿ ಈ ಘಟನೆ ನಡೆದಿದ್ದು ಗ್ರಾಮದ ದಲಿತ ಯುವಕ ಸ್ವಾಮಿನಾಥ್‌ ದೇವಸ್ಥಾನಕ್ಕೆ ಹೋದಾಗ ಅಲ್ಲಿನ ಸವರ್ಣಿಯರು ಸ್ವಾಮಿನಾಥ್‌ ಗೆ ಪ್ರವೇಶ ನಿರಾಕರಿಸಿದ್ದರು ಎಂದು ಯುವಕ ಆರೋಪಿಸಿದ್ದಾನೆ.

ಈ ಬಗ್ಗೆ ವಾದ ವಿವಾದ ನಡೆದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಅಡಿಷನಲ್‌ ಎಸ್ಪಿ ಗೋಪಾಲ್‌ , ಡಿವೈಎಸ್‌ಪಿ ಮಂಜುನಾಥ್‌, ತಹಸೀಲ್ದಾರ್‌ ಶಿರಿನ್ ತಾಜ್‌ ,ಸಿಪಿಐ ಹನುಮಂತರಾಯಪ್ಪ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿದರು. ದೇವಸ್ಥಾನಗಳಿಗೆ ಎಲ್ಲರಿಗೂ ಮುಕ್ತ ಪ್ರವೇಶವಿದೆ. ಇದನ್ನು ಮೇಲ್ಜಾತಿಯ ಜನರು ಅರಿತು ಬೆರೆತು ಒಗ್ಗಟ್ಟಾಗಿ ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕು ಸಾಗಿಸಬೇಕು. ಗ್ರಾಮದಲ್ಲಿ ಇನ್ನೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಗ್ರಾಮಸ್ಥರು ಎಚ್ಚರಿಕೆ ವಹಿಸಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಮುಂದೆ ಇದೇ ರೀತಿ ಮುಂದುವರಿದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ ಗೋಂದಲಗಳಿಗೆ ತೆರೆ ಎಳೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ