ಒಳಮೀಸಲು ಹೆಸರಿನಲ್ಲಿ ದಲಿತರಿಗೆ ಮೋಸ: ಕೆ.ಎಸ್.ಈಶ್ವರಪ್ಪ

KannadaprabhaNewsNetwork |  
Published : Apr 26, 2026, 02:30 AM IST
ಕೆ.ಎಸ್‌.ಈಶ್ವರಪ್ಪ | Kannada Prabha

ಸಾರಾಂಶ

ಒಳಮೀಸಲಾತಿ ಪ್ರಕಟಣೆ ರಾಜ್ಯ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಒಳಮೀಸಲಾತಿ ಪ್ರಕಟಣೆ ರಾಜ್ಯ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಬಂದಾಗಿನಿಂದ ಒಂದಲ್ಲಾ ಒಂದು ರೀತಿಯಲ್ಲಿ ದಲಿತರಿಗೆ ಮತ್ತು ಹಿಂದುಳಿದ ವರ್ಗಕ್ಕೆ ಮೋಸ ಮಾಡುತ್ತ ಬಂದಿದೆ. 165 ಕೋಟಿ ರು. ವೆಚ್ಚದಲ್ಲಿ ಮಾಡಿದ ಕಾಂತ್‌ರಾಜ್ ವರದಿಯನ್ನು ಮೂಲೆಗುಂಪು ಮಾಡಿದೆ. 2 ನೇ ವರದಿಗೆ 120 ಕೋಟಿ ರು. ಖರ್ಚು ಮಾಡಿತ್ತು. ಅದು ಜಾರಿಗೆ ಬಂದಿಲ್ಲ. ನಂತರ ನ್ಯಾಯಮೂರ್ತಿ ನಾಗಮೋಹನ್‌ದಾಸ್ ನೇತೃತ್ವದಲ್ಲಿ 180 ಕೋಟಿ ರು. ವೆಚ್ಚದಲ್ಲಿ ಒಳಮೀಸಲಾತಿ ಜಾರಿಗೆ ವರದಿಗೆ ನೀಡುವಂತೆ ಸೂಚಿಸಲಾಗಿತ್ತು. ಆದನ್ನು ಈಡೇರಿಸಲಿಲ್ಲ.ಮುಖ್ಯಮಂತ್ರಿಗಳು ತರಾತುರಿಯಲ್ಲಿ 5.5, 4.5 ಮತ್ತು ಶೇ.5ರ ಒಳಮೀಸಲಾತಿಯನ್ನು ಘೋಷಿಸಿದೆ. ಸರಿಯಾದ ಮಾರ್ಗದರ್ಶನ ಪಡೆಯದೇ ಕೋರ್ಟ್ ಆದೇಶವನ್ನು ದಿಕ್ಕರಿಸಿ ಏಕಾಏಕಿ ಘೋಷಣೆ ಮಾಡಿದೆ. ಇದು ಇನ್ನಷ್ಟು ಗೊಂದಲಕ್ಕೀಡುಮಾಡಿದ್ದು, ಅನೇಕ ದಲಿತ ಮುಖಂಡರು ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. ತಮ್ಮ ಅವಧಿಯಲ್ಲಿ ಒಳಮೀಸಲಾತಿಯ ಘೋಷಣೆ ಮಾಡಿದ್ದೇನೆ ಎಂದು ತೋರ್ಪಡಿಕೆಗೆ ಕ್ರೆಡಿಟ್ ಪಡೆಯಲು ಸರಿಯಾದ ಮಾನದಂಡ ಇಲ್ಲದ ಇದನ್ನು ಘೋಷಣೆ ಮಾಡಿ ಮುಖ್ಯಮಂತ್ರಿಗಳು ಸಿಹಿ ತಿಂದಿದ್ದಾರೆ. ಅವರೇ ನಾಲ್ಕುಜನ ಕುಳಿತುಕೊಂಡು ಮಾಡಿದ ಈ ಘೋಷಣೆಯನ್ನು ದಲಿತ ಮುಖಂಡರೇ ಸ್ವೀಕಾರ ಮಾಡುತ್ತಿಲ್ಲ. ಸರ್ಕಾರದ ಈ ಪ್ರಚಾರ ತಂತ್ರದ ಬಗ್ಗೆ ಜನರಿಗೆ ಅರಿವಿದೆ ಎಂದರು.

ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆದಿದ್ದು ಕಾನೂನು ವಿರೋಧಿ ಕ್ರಮ. ಈ ಸರ್ಕಾರ ಕುಡುಕರ ಸರ್ಕಾರವಾಗಿದೆ. ಹಿಂದೂಗಳ ತಾಳ್ಮೆಯನ್ನು ಇನ್ನೇಷ್ಟು ಪರೀಕ್ಷೆ ಮಾಡುತ್ತೀರಿ ? ಹಿಂದೂಗಳ ತಾಳ್ಮೆ ದೌರ್ಬಲ್ಯವಲ್ಲ, ಸುಮ್ಮನೆ ಕೂತಿದ್ದಾರೆ ಎಂದು ಭಾವಿಸಬೇಡಿ. ಯಾವಾಗ ಈ ಸರ್ಕಾರವನ್ನು ಬಲಿಹಾಕಬೇಕೋ ಆಗ ಹಾಕುತ್ತಾರೆ ಎಂದು ಹೇಳಿದರು.

ಸಿಎಂ-ಡಿಸಿಎಂ ಈ ಬಗ್ಗೆ ಚಕಾರವೆತ್ತಿಲ್ಲ. ಜನಿವಾರ ತೆಗೆಸಿದವರನ್ನು ಅಮಾನತ್ತು ಮಾಡಿದರೆ ಈ ಸಮಸ್ಯೆ ಬಗೆಹರಿಯುವುದಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂ ವಿದ್ಯಾರ್ಥಿಗಳ ಮೇಲೆ ನಿರಂತರ ಈ ರೀತಿಯ ದಬ್ಬಾಳಿಕೆ ನಡೆಯುತ್ತಿದೆ. ಹಿಜಾಬ್ ವಿವಾದವಾದಾಗ ಬಾಯಿ ಬಡಕೊಂಡ ಕಾಂಗ್ರೆಸ್ಸಿಗರು ಈಗ ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದ ಅವರು, ಐದು ರಾಜ್ಯಗಳ ಚುನಾವಣಾ ಫಲಿತಾಂಶ ಮತ್ತು ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಬಂದ ಮೇಲೆ ಕಾಂಗ್ರೆಸ್ ಹೊತ್ತಿ ಉರಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಲೂರಿನಲ್ಲಿ ಶಂಕರಾಚಾರ್ಯರ ಜಯಂತಿ
ಭ್ರಷ್ಟಾಚಾರದ ವಿರುದ್ಧ ಹೋರಾಟಲು ಸಿದ್ಧ ಎಂದ ಕನಾಯ್ಕನಹಳ್ಳಿ ಪ್ರದೀಪ್