ಹುಬ್ಬಳ್ಳಿ:
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬರೀ ಸುಳ್ಳು ಹೇಳುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಅವರು ಹೇಳಿದ್ದು ಒಂದು, ಮಾಡಿದ್ದು ಮತ್ತೊಂದು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟರು. ಆದರೆ, ಅವುಗಳು ಜನರಿಗೆ ತಲುಪಿಸುವ ಕುರಿತು ಗ್ಯಾರಂಟಿಯನ್ನೇ ನೀಡಲಿಲ್ಲ ಎಂದು ಕಿಡಿಕಾರಿದರು.
ದಲಿತರನ್ನು ಬಡವರನ್ನಾಗಿಯೇ ಉಳಿಸುವ, ಬರೀ ಮತಗಳಿಗಾಗಿ ಮಾತ್ರ ಬಳಕೆ ಮಾಡಿ, ಗುಲಾಮರನ್ನಾಗಿಸುವುದು ಕಾಂಗ್ರೆಸ್ ಕುತಂತ್ರವಾಗಿದೆ. ದೇಶದ ಬಗ್ಗೆ ಚಕಾರವೆತ್ತದೇ, ಬರೀ ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ. ಪ್ರಧಾನಿಗಳ ಬಗ್ಗೆ ಅಪಪ್ರಚಾರ ಮಾಡುವುದನ್ನೇ ಕಾಯಕವನ್ನಾಗಿಸಿಕೊಂಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ಆರೋಪಿಸುತ್ತಾರೆ. ಆದರೆ, ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂದು ಪ್ರಧಾನಿಗಳೇ ಸ್ಪಷ್ಟನೆ ನೀಡಿದ್ದಾರೆ ಎಂದರು.ಕಾಂಗ್ರೆಸ್ಸಿನವರಿಗೆ ಸೋಲಿನ ಭಯ:
ಪ್ರಜ್ವಲ್ ರೇವಣ್ಣ ಪ್ರಕರಣ ಅಕ್ಷಮ್ಯ ಅಪರಾಧವಾಗಿದ್ದು, ತಪ್ಪಿತಸ್ಥರು ಎಂದು ಕಂಡು ಬಂದಲ್ಲಿ ಕಾನೂನು ರೀತಿಯ ಶಿಕ್ಷೆಯಾಗಲಿ. ಹಾಗೆಯೇ ಈ ಅಶ್ಲೀಲ ವಿಡಿಯೋ ತುಣುಕು ಹರಡಿದವರ ಮೇಲೆಯೂ ಕ್ರಮವಾಗಲಿ. ಇಂತಹ ವಿಡಿಯೋ ಅಂತರ್ಜಾಲದಲ್ಲಿ ಪ್ರಸಾರವಾಗದಂತೆ ನಿರ್ಬಂಧ ವಿಧಿಸುವಂತೆ ಒತ್ತಾಯಿಸಿದರು.
ಈ ವೇಳೆ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ಬಸವರಾಜ ಅಮ್ಮಿನಭಾವಿ, ಗುರು ಪಾಟೀಲ, ಪರಶುರಾಮ ಪೂಜಾರ ಸೇರಿದಂತೆ ಹಲವರಿದ್ದರು.