ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಜಯಂತಿಗೆ ಜನರು ಸ್ವಯಂ ಪ್ರೇರಿತವಾಗಿ ಆಗಮಿಸುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿನ ದಲಿತ ಮುಖಂಡರು ರಾಜಕಾರಣಿಗಳಿಂದ ಹಣಪಡೆದು ಜನರನ್ನು ಕರೆತಂದು ಅಂಬೇಡ್ಕರ್ ಜಯಂತಿ ಮಾಡಿದ್ದಾರೆ ಎಂದರು.
ಜೆಡಿಎಸ್ ಪಕ್ಷದ ಎಸ್ಸಿ ವಿಭಾಗದಿಂದ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದೇವೆ, ಅದನ್ನು ಸಹಿಸಲಾಗದೆ ಕಾಂಗ್ರೆಸ್ನವರು ಅಂಬೇಡ್ಕರ್ ಜಯಂತಿ ಹೆಸರಿನಲ್ಲಿ ಕಾರ್ಯಕರ್ತರ ಸಭೆಗೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ ಎಸ್ಸಿ ವಿಭಾಗದ ಅಧ್ಯಕ್ಷ ಕೆ.ಬಿ.ರಾಮು ಅವರು ಒಬ್ಬ ಪಕ್ಷಾಂತರಿ. ಜೆಡಿಎಸ್ನಲ್ಲಿದ್ದಾಗ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರಿಂದ ಸಾಕಷ್ಟು ಅನುಕೂಲ ಪಡೆದುಕೊಂಡಿದ್ದೀಯಾ. ಇದೀಗ ಅವರ ವಿರುದ್ಧವೇ ಮಾತನಾಡುತ್ತಿದ್ದೀಯ. ತಾಲೂಕಿನಲ್ಲಿ ದಲಿತರು ಏನಾದರೂ ರಾಜಕೀಯವಾಗಿ ಅಧಿಕಾರ ಅನುಭವಿಸಿದ್ದಾರೆ ಎಂದರೆ ಅದು ಜೆಡಿಎಸ್ ಪಕ್ಷ, ಸಿ.ಎಸ್.ಪುಟ್ಟರಾಜು ಅವರಿಂದ ಎಂದು ಕಾಂಗ್ರೆಸ್ನ ಬೆಂಬಲಿತ ದಲಿತ ನಾಯಕರ ವಿರುದ್ಧ ಹರಿಹಾಯ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರು, ಒಕ್ಕಲಿಗರ ವಿರೋಧಿಯಾಗಿದ್ದಾರೆ. ದಲಿತರಿಗೆ ಅಧಿಕಾರ ನೀಡದೆ ವಂಚಿಸಿದ್ದಾರೆ. ತಾಕತ್ತಿದ್ದರೆ ರಾಜ್ಯದಲ್ಲಿ ದಲಿತರನ್ನು ಸಿಎಂ ಮಾಡಿ ಕೇಂದ್ರದಲ್ಲಿ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿ ನಾವು ಕಾಂಗ್ರೆಸ್ ಗೆ ಮತಹಾಕುತ್ತೇವೆ ಎಂದು ಸವಾಲು ಹಾಕಿದರು.