ಅಣೆಕಟ್ಟೆ ಗೇಟ್‌ ಕಟ್‌ ಪ್ರಕರಣ: ಸಚಿವ ತಂಗಡಗಿ ರಾಜಿನಾಮೆಗೆ ಆಗ್ರಹಿಸಿ ಇಂದು ಧರಣಿ

KannadaprabhaNewsNetwork |  
Published : Aug 16, 2024, 12:50 AM IST
ಕಾರಟಗಿಯ ಪ್ರವಾಸಿ ಮಂದಿರದಲ್ಲಿ ಕೃಷಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮಾತನಾಡಿದರು. | Kannada Prabha

ಸಾರಾಂಶ

ನೀರಾವರಿ ಸಲಹಾ ಸಮಿತಿಯ ಬೇಜವಾಬ್ದಾರಿಯಿಂದಾಗಿ ಈಗ ನೀರು ತಡೆಯಲು ವಿಫಲರಾಗಿದ್ದು, ಇದರ ನೈತಿಕ ಹೊಣೆ ಹೊತ್ತು ತುಂಗಭದ್ರಾ ಮಂಡಳಿಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ತಂಗಡಗಿ ರಾಜೀನಾಮೆ ನೀಡಬೇಕು.

ಕನ್ನಡಪ್ರಭ ವಾರ್ತೆ ಕಾರಟಗಿ

ತುಂಗಭದ್ರಾ ಅಣೆಕಟ್ಟೆಯ ೧೯ನೇ ಗೇಟ್ ಮುರಿದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಮತ್ತು ಈ ಅವಘಡಕ್ಕೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ನಿರ್ಲಕ್ಷ್ಯವೇ ಮುಖ್ಯ ಕಾರಣವಾಗಿದ್ದರಿಂದ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಆ.೧೬ರಿಂದ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಕೃಷಿ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಬಿಲ್ಗಾರ್ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಸಲಹಾ ಸಮಿತಿಯ ಬೇಜವಾಬ್ದಾರಿಯಿಂದಾಗಿ ಈಗ ನೀರು ತಡೆಯಲು ವಿಫಲರಾಗಿದ್ದು, ಇದರ ನೈತಿಕ ಹೊಣೆ ಹೊತ್ತು ತುಂಗಭದ್ರಾ ಮಂಡಳಿಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ತಂಗಡಗಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಕಳೆದ ಒಂದೂವರೆ ವರ್ಷದಿಂದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ೭೦ ವರ್ಷಗಳ ಹಳೆಯದಾದ ಗೇಟ್‌ಗಳನ್ನು ಬದಲಾಯಿಸಬೇಕು. ೨೦೧೯ರಲ್ಲಿ ಮುನಿರಾಬಾದಿನಲ್ಲಿ ಎಡದಂಡೆ ಮೇಲ್ಮಟ್ಟದ ಕಾಲುವೆ ಬಳಿ ಗೇಟ್ ಮುರಿದು ಸಣ್ಣ ಪ್ರಮಾಣದ ಅವಘಡ ಉಂಟಾಗಿ ನೀರು ಪೋಲಾದ ಘಟನೆ ನಡೆದಿತ್ತು. ಆ ರೀತಿಯ ಅವಘಡಗಳು ಸಂಭವಿಸಬಾರದೆಂದು ನಿಗಾವಹಿಸುವಂತೆ ಒತ್ತಾಯಿಸಿದರೂ ಕ್ರಮವಾಗಿಲ್ಲ ಏಕೆ? ಎಂದು ಪ್ರಶ್ನಿಸಿದರು.

ಸಂಘದ ಕಲ್ಯಾಣ ಕರ್ನಾಟಕ ಘಟಕದ ಅಧ್ಯಕ್ಷ ಹನುಮಂತಪ್ಪ ಭೋವಿ ಮಾತನಾಡಿ, ಆ. ೧೬ರಂದು ಕಾರಟಗಿಯ ವಿಶೇಷ ಎಪಿಎಂಸಿಯಲ್ಲಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದರು.

ಈ ವೇಳೆ ಸಂಘದ ಉಪಾಧ್ಯಕ್ಷ ಮೋಹನ್ ಕುರಿ, ರಮೇಶ್ ಕಂಪ್ಲಿ, ಕಾರಟಗಿ ತಾಲೂಕಾ ಮಹಿಳಾ ಘಟಕದ ಅಧ್ಯಕ್ಷೆ ಹುಲಿಗೆಮ್ಮ ನಾಯಕ್, ಜಿಲ್ಲಾ ಉಪಾಧ್ಯಕ್ಷೆ ರಾಜೇಶ್ವರಿ, ತಾಲೂಕಾ ಉಪಾಧ್ಯಕ್ಷ ವೀರೇಶ್ ಮುಕ್ಕುಂದಾ ಮತ್ತು ಕನಕಮ್ಮ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉರ್ದು ಮುಸ್ಲಿಂರಿಗಷ್ಟೇ ಸೀಮಿತವಲ್ಲ ಜನಸಾಮಾನ್ಯರ ಭಾಷೆ
2 ಕೋಟಿ ವಂಚನೆ ಪ್ರಕರಣ: ಶರವಣ ಅಂದರ್