- ಪೂರ್ವ ರಂಗನಮನ: ಭರತನಾಟ್ಯದ ನೃತ್ಯವೈಭವ ಕಾರ್ಯಕ್ರಮದಲ್ಲಿ ದಿನೇಶ ಶೆಟ್ಟಿ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಬಾಪೂಜಿ ಸಭಾಂಗಣದಲ್ಲಿ ನಮನ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಸಂಜೆ ನಡೆದ ಪೂರ್ವ ರಂಗನಮನ: ಭರತನಾಟ್ಯದ ನೃತ್ಯ ವೈಭವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈಗಿನ ಪೋಷಕರಲ್ಲಿ ಮಕ್ಕಳಿಗೆ ಓದಿನ ಜೊತೆಗೆ ಇಂತಹ ಸಾಂಸ್ಕೃತಿಕ ಕಲೆಗಳ ತರಬೇತಿಗೆ ಸೇರಿಸುವ ಆಸಕ್ತಿ ಹೆಚ್ಚಾಗುತ್ತಿದೆ. ಇದರಿಂದ ಮಕ್ಕಳ ಸರ್ವತೋನ್ಮುಖ ಬೆಳವಣಿಗೆ ಆಗುತ್ತದೆ. ಈ ನಿಟ್ಟಿನಲ್ಲಿ ಅಂತರ ರಾಷ್ಟ್ರೀಯಮಟ್ಟದ ಕಲಿಕೆಯನ್ನು ನೀಡುತ್ತಿರುವ ಗುರು ವಿದುಷಿ ಡಿ.ಕೆ.ಮಾಧವಿ ಅವರ ಶ್ರಮ ನಿಜಕ್ಕೂ ಶ್ಲಾಘನೀಯ ಎಂದರು.
ನಮನಶ್ರೀ ಪ್ರಶಸ್ತಿ ಪುರಸ್ಕೃತ ಬೆಂಗಳೂರಿನ ನಿನಾದ ನಾಟ್ಯ ಅಕಾಡೆಮಿಯ ನಿರ್ದೇಶಕಿ, ಗುರು ವಿದುಷಿ ಧರಣಿ ಟಿ.ಕಶ್ಯಪ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಮಾಧವಿಯ ಶಿಷ್ಯಂದಿರ ನೃತ್ಯ ನೋಡಿ ಅವರ ಬದ್ಧತೆ ಶ್ರಮ ಎಲ್ಲವೂ ಕಾಣುತ್ತಿದೆ ಎಂದು ಶುಭ ಹಾರೈಸಿದರು.ನಮನ ಅಕಾಡೆಮಿ ಅಧ್ಯಕ್ಷ ಕೆ.ಎನ್.ಗೋಪಾಲಕೃಷ್ಣ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ನೃತ್ಯಗುರು ವಿದುಷಿ ಡಿ.ಕೆ.ಮಾಧವಿ, ಸೋಶಿಯಲ್ ಮೀಡಿಯಾ ಚಾನೆಲ್ನ ಗಾಯತ್ರಿ, ನಗರಸಭಾ ಮಾಜಿ ಅಧ್ಯಕ್ಷ ಆರ್.ಎಚ್. ನಾಗಭೂಷಣ್, ಅಕಾಡೆಮಿಯ ನಿರ್ದೇಶಕರಾದ ಪಿ.ಸಿ.ರಾಮನಾಥ, ಅನಿಲ್ ಬಾರಂಗಳ್, ಕಿರಣ್ ರವಿನಾರಾಯಣ್, ಸಿ.ಆರ್.ರಜತ್, ಅಕಾಡೆಮಿ ಅಧ್ಯಕ್ಷ ಕೆ.ಎನ್.ಗೋಪಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಇತರರು ಇದ್ದರು. ಮಾನಸ ಕಾರ್ಯಕ್ರಮ ನಿರೂಪಿಸಿ, ರಾಮನಾಥ ವಂದಿಸಿದರು.
- - - -10ಕೆಡಿವಿಜಿ37.ಜೆಪಿಜಿ:
-10ಕೆಡಿವಿಜಿ38: