ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಕಾರಸವಾಡಿ ಗ್ರಾಮ ಸಮೀಪವಿರುವ ಚಿಕ್ಕಕೆರೆ ಏರಿ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಜಲ ದಿನಾಚರಣೆ ಅಂಗವಾಗಿ ಜಲಮೂಲಗಳ ಸಂರಕ್ಷಣೆ- ನಮ್ಮೆಲ್ಲರ ಹೊಣೆ ಕಾರ್ಯ ಯೋಜನೆಗೆ ಚಾಲನೆ- ಶ್ರಮದಾನ- ಜಲ ಸಾಕ್ಷರತೆ -ಜಲ ಜಾಗೃತಿ ಗೀತ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಶುದ್ಧ ಕುಡಿಯುವ ನೀರು ಕೂಡ ಉದ್ಯಮವಾಗುತ್ತಿದೆ. ಪ್ರಕೃತಿದತ್ತವಾಗಿ ಸಿಗಬೇಕಿದ್ದ ಶುದ್ಧ ನೀರು ಈಗ ಬಾಟಲ್ನೊಳಗೆ ಸೇರಿಕೊಂಡಿದೆ. ನೀರು ಕುಡಿಯಲು ಹಣ ಕೊಟ್ಟು ಬಾಟಲಿ ನೀರನ್ನು ಉಪಯೋಗಿಸುವ ಹಂತಕ್ಕೆ ತಲುಪಿದ್ದೇವೆ. ಮನೆ ಖರ್ಚುಗಳ ಲೆಕ್ಕದಲ್ಲಿ ನೀರಿನ ಲೆಕ್ಕವು ಶೇ.೩ರಷ್ಟು ಸೇರಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.ನೀರನ್ನು ಶುದ್ಧೀಕರಿಸಿ ಬಾಟಲ್ಗಳಲ್ಲಿ ಮಾರಾಟ ಮಾಡುವುದು ಈಗ ಉದ್ಯಮವಾಗಿ ಬೆಳೆಯುತ್ತಿದೆ. ಬಿಲಿಯನ್ಗಳ ಲೆಕ್ಕದಲ್ಲಿ ನೀರು ಮಾರಾಟವಾಗುತ್ತಿದೆ. ನೀರು ಈಗ ಚಿನ್ನದ ರೀತಿ ಆಗಿದೆ. ಇದನ್ನು ಅರಿತು ನೀರನ್ನು ಸಂರಕ್ಷಿಸುವ ಜೊತೆಗೆ ಅದನ್ನು ಮಿತವಾಗಿ ಬಳಸುವ ಮನೋಭಾವವೂ ಜನರಲ್ಲಿ ಮೂಡಬೇಕಿದೆ ಎಂದರು.
ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಜೆ.ನಂಜುಂಡೇಗೌಡ ಮಾತನಾಡಿ, ಜಲಮೂಲ ಎಲ್ಲ ಜೀವರಾಶಿಗಳಿಗೆ ಅತ್ಯವಶ್ಯಕ. ಎಲ್ಲರಲ್ಲೂ ಜಲಜಾಗೃತಿಯಾಗಬೇಕಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ನೀರಿನ ಹಾಹಾಕಾರ ಹೆಚ್ಚಾಗಲಿದೆ. ಅಲ್ಲಿನ ಜನರು ನೀರಿಗಾಗಿ ಹೊಸ ವಿಧಾನಗಳನ್ನು ಕಂಡುಕೊಳ್ಳಲು ಮುಂದಾಗಿದ್ದಾರೆ, ನೀರು ಉಳಿಸುವ ತಂತ್ರಜ್ಞಾನವನ್ನು ಶೋಧಿಸಿದ್ದಾರೆ, ನಮ್ಮ ಇಲಾಖೆಯಿಂದ ಕೆರೆಗಳ ಅಭಿವೃದ್ದಿಗೆ ಸಹಕಾರ ಮತ್ತು ಆದ್ಯತೆ ನೀಡಲಾಗುವುದು ಎಂದು ನುಡಿದರು.
ಸರ್ಕಾರಿ ಮಹಿಳಾ ಕಾಲೇಜಿನ ಎನ್ಎಸ್ ಎಸ್ ವಿದ್ಯಾರ್ಥಿಗಳು ಮತ್ತು ಸ್ವಯಂಸೇವಾ ಸಂಸ್ಥೆಗಳ ಪದಾಧಿಕಾರಿಗಳು ಪರಿಸರ ಪ್ರೇಮಿಗಳು ವಿವಿಧ ಇಲಾಖೆ ಅಧಿಕಾರಿಗಳು ಒಗ್ಗೂಡಿ ಚಿಕ್ಕಕೆರೆಯ ಸ್ವಚ್ಛತೆಯನ್ನು ನೆರವೇರಿಸಿದರು ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ತೆರವುಗೊಳಿಸಿದರು. ಜೆಸಿಬಿ ಯಂತ್ರದ ಮೂಲಕ ಕೆರೆ ಏರಿಯನ್ನು ಸ್ವಚ್ಛ ಮಾಡಿ ತಾತ್ಕಾಲಿಕ ರಸ್ತೆ ನಿರ್ಮಿಸಿದರು.ಜಲ ಜಾಗೃತಿ ಕುರಿತು ಗಾಯಕ ಹನಿಯಂಬಾಡಿ ಎನ್.ಶೇಖರ್ ಮತ್ತು ತಂಡದಿಂದ ಗೀತ ಗಾಯನ ನಡೆಯಿತು.