ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ ಐದು ವರ್ಷಗಳಿಂದ ಶಾಲಾ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶವನ್ನು ಹೊರಡಿಸುತ್ತಾ 2022ರ ನವೆಂಬರ್ 14 ರಂದು ಉಚ್ಚ ನ್ಯಾಯಾಲಯ ಹೊರಡಿಸಿದ ಆದೇಶ ಗಾಳಿಗೆ ತೂರಿದೆ ಎಂದರು.ಭ್ರಷ್ಟಾಚಾರಕ್ಕೆ ದಾರಿ:
ಹೊಸ ನಿಯಮಗಳಲ್ಲಿ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆ, ಭೂ ಪರಿವರ್ತನೆ, ಪೊಲೀಸ್ ಇಲಾಖೆಯ ಅನುಮತಿ ಸೇರಿದಂತೆ ಇನ್ನಿತರ ಹಲವಾರು ನಿಯಮಗಳನ್ನು ಪಾಲಿಸಿದರೆ ಮಾತ್ರ ನವೀಕರಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾರುಬಾರು ಮಾಡುವ ಮೂಲಕ ಪರೋಕ್ಷವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಲ್ಲಿ ನೆಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಿನ ಅನ್ಯಾಯವನ್ನು ವಿರೋಧಿಸಿ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಕರೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ನೀಡಿದರು. ಇಡೀ ರಾಜ್ಯದಲ್ಲಿ ಎಷ್ಟು ಸರ್ಕಾರಿ ಶಾಲೆಗಳ ಕಟ್ಟಡಗಳು ಸುಸ್ಥಿತಿಯಲ್ಲಿವೆ. ಇಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕಟ್ಟಡಗಳಿಗೆ ಒಂದು ನ್ಯಾಯ ಸರ್ಕಾರಿ ಶಾಲಾ ಕಟ್ಟಡಗಳಿಗೆ ಒಂದು ನ್ಯಾಯವೇ, ಶಿಕ್ಷಣ ಇಲಾಖೆಯ ಅಧೀನ ಅಧಿಕಾರಿಗಳು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಎಂಬ ನಿಲುವು ಸೂಚಿಸಿ ಪ್ರತಿ ವರ್ಷವೂ ನವೀಕರಣ ಮಾಡಬೇಕೆಂದಿರುವುದು ಅವೈಜ್ಞಾನಿಕ ನೀತಿ. ಸರ್ಕಾರಿ ಶಾಲೆಗಳ ವ್ಯವಸ್ಥೆಯನ್ನ ಸೃಷ್ಟಿಯಲ್ಲಿಟ್ಟು ಖಾಸಗಿ ಶಿಕ್ಷಣ ಸಂಸ್ಥೆಗಳ ಕಟ್ಟಡಗಳ ಬಗ್ಗೆ ಆದೇಶಗಳನ್ನು ಹೊರಡಿಸಲಿ. ಇದಕ್ಕೆ ನಾವು ಬದ್ಧ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಹೆನ್ರಿ ಪ್ರಸನ್ನ ಕುಮಾರ್ ಮಾತನಾಡಿ, 2018ರ ಹಾಗೂ 2024ರ ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾದ ಖಾಸಗಿ ಶಾಲೆಗಳ ನವೀಕರಣ ಕನಿಷ್ಠ 10 ವರ್ಷಕ್ಕೊಮ್ಮೆ ನೀಡಲು ಸೂಚಿಸುತ್ತಾರೆ. ಕರ್ನಾಟಕ ರಾಜ್ಯ ಪತ್ರ ಅಧಿಕೃತವಾಗಿ ಪ್ರಕಟಿಸಲಾದ ಮಾಹಿತಿಯನ್ನು ಧಿಕ್ಕರಿಸಿ ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡುತ್ತಾ ಪ್ರತಿಯೊಂದು ಇಲಾಖೆಗೆ ನಮ್ಮನ್ನು ಅಲೆಸಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇಷ್ಟ ಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.ಖಾಸಗಿ ಶಾಲೆಗೆ ಅನಗತ್ಯ ಮಾನದಂಡ