ಕನ್ನಡಪ್ರಭ ವಾರ್ತೆ ಮಾಲೂರು
ಮಾರ್ಚ್ 1ರಂದು ಕಾರ್ಯಕ್ರಮ
ಮಾರ್ಚ್ ಒಂದರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ದ್ರೌಪದಿ ಪ್ರವರ ದರ್ಪಣ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು ,ಈ ಕಾರ್ಯಕ್ರಮದಲ್ಲಿ ವಹ್ನಿಕುಲ ಸಮುದಾಯದ ಕುಲದೇವತೆ ಆದಿಶಕ್ತಿ ದ್ರೌಪದಿ ಅಮ್ಮನವರ ಪವಿತ್ರ ಸಂಪ್ರದಾಯಗಳನ್ನು ಶ್ರದ್ಧೆಯಿಂದ ನಡೆಸಿಕೊಂಡು ಬರುತ್ತಿರುವ ಕರಗ ಪೂಜಾರಿಗಳಿಗೆ ಸುಕೃತ ಧರ್ಮಪಾಲ ಎಂಬ ಬಿರುದು ಹಾಗೂ ಕರಗ ಪೂಜಾರಿಗಳನ್ನು ಬೆಂಬಲಿಸುವ ಪತ್ನಿಯರ ನಿಸ್ವಾರ್ಥ ಸಮರ್ಪಣೆಯನ್ನು ಗುರುತಿಸಿ ಸುಮಾರು 200 ಕರಗ ಪೂಜಾರಿಗಳ ಧರ್ಮಪತ್ನಿಯರಿಗೆ ಸುಧರ್ಮ ಧರ್ಮ ಪತ್ನಿ ಎಂಬ ಬಿರುದು ನೀಡಿ ಗೌರವಿಸಲಾಗುತ್ತಿದೆ ಎಂದರು.ಇದೇ ಕಾರ್ಯಕ್ರಮದಲ್ಲಿ ವಹ್ನಿಕುಲದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಹೆಚ್ಚಿನ ವಿವರಕ್ಕಾಗಿ ಮೊಬೈಲ್ ನಂ.9845707108/8123467463/9844017211/9964007050 ನ್ನು ಸಂಪರ್ಕಿಸಲು ಮನವಿ ಮಾಡಿದರು.ಮಾರಿಕಾಂಬ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಿ. ವೆಂಕಟೇಶ್, ಶ್ರೀ ಧರ್ಮರಾಯ ಸ್ವಾಮಿ ದೇವಾಲಯದ ಅಧ್ಯಕ್ಷ ಎಂ.ಪಿ. ವಿಜಯಕುಮಾರ್ ಮಾತನಾಡಿದರು. ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ,ಯಜಮಾನ ಪೆರಮಾಳ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎ, ರಾಜಪ್ಪ,ಸದಸ್ಯ ರಾಮಮೂರ್ತಿ ಇನ್ನಿತರರು ಇದ್ದರು.