ನಾಳೆಯಿಂದ ದಸರಾ ಕ್ರೀಡಾಕೂಟ ಆರಂಭ

KannadaprabhaNewsNetwork |  
Published : Sep 20, 2024, 01:32 AM ISTUpdated : Sep 20, 2024, 01:33 AM IST

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಪಂಚಾಯಿತಿ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆ.21, 22 ರಂದು 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಸೆ.21 ರಂದು ಬೆಳಿಗ್ಗೆ 9 ಗಂಟೆಗೆ ಹೊಸದುರ್ಗ ತಾಲೂಕು ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್, ಯೋಗ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಪಂಚಾಯಿತಿ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆ.21, 22 ರಂದು 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಸೆ.21 ರಂದು ಬೆಳಿಗ್ಗೆ 9 ಗಂಟೆಗೆ ಹೊಸದುರ್ಗ ತಾಲೂಕು ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್, ಯೋಗ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ಸೆ.22ರಂದು ಬೆಳಿಗ್ಗೆ 9 ಗಂಟೆಗೆ ಹಿರಿಯೂರು ತಾಲೂಕು ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‍ಬಾಲ್, ಥ್ರೋಬಾಲ್, ಯೋಗ ಮತ್ತು ನೆಹರೂ ಕ್ರೀಡಾಂಗಣದಲ್ಲಿ ಖೋಖೋ, ಕಬಡ್ಡಿ ಕ್ರೀಡೆ ಹಾಗೂ ಹೊಳಲ್ಕೆರೆ ತಾಲೂಕಿನ ರಾಮಗಿರಿ ಎಸ್ ಜೆಎಂ ಪ್ರೌಢಶಾಲೆ, ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಗ್ರಾಮಾಂತರ ಪ್ರೌಢಶಾಲೆ, ಚಳ್ಳಕೆರೆ ತಾಲೂಕಿನ ಪರಶುರಾಂಪುರ ಕರ್ನಾಟಕ ಪಬ್ಲಿಕ್ ಶಾಲೆ, ಚಿತ್ರದುರ್ಗ ತಾಲೂಕಿನ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್, ಯೋಗ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ದಸರಾ ಕ್ರೀಡಾ ಕೂಟದಲ್ಲಿ ಎಲ್ಲಾ ವಯೋಮಾನದವರು ಭಾಗವಹಿಸಬಹುದು. ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಪಡೆದವರು ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗ ವಿ. ಹನುಮಂತಪ್ಪ ಮೊ.ಸಂ. 99001623062, ಹಿರಿಯೂರು ಶಿವಪ್ರಸಾದ್- 9986615315, ಬಾಲಾಜಿ- 87460264439, ಹೊಳಲ್ಕೆರೆ ರುದ್ರೇಶ್- 9901669702, ಮೊಳಕಾಲ್ಮೂರು- 9916061416, ಚಳ್ಳಕೆರೆ ತಿಪ್ಪೇಸ್ವಾಮಿ- 9611344434, ಚಿತ್ರದುರ್ಗ ಮಹಮ್ಮದ್ ಮುಹೀಬುಲ್ಲಾ- 9611673475 ಹಾಗೂ ಕಚೇರಿಯ ದೂರವಾಣಿ ಸಂಖ್ಯೆ- 08194-235635 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ