ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದಲ್ಲಿ ಮಾಜಿ ಸೈನಿಕ ಶರಣಬಸಪ್ಪ ಓಗಿ ವೇದಿಕೆಯಲ್ಲಿ ಕಸಾಪ 3ನೇ ಕಲಬುರಗಿ ವಿಭಾಗೀಯ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಸಮಾಜದ ಶುದ್ಧೀಕರಣಕ್ಕೆ ದಾಸರು ಆಧ್ಯಾತ್ಮಿಕ ನೆಲೆಯಲ್ಲಿ ದಾಸ ಸಾಹಿತ್ಯ ರಚನೆ ಮಾಡಿದ್ದಾರೆ. ಆ ಸಾಹಿತ್ಯ ಎಲ್ಲ ಕಾಲಕ್ಕೂ ಅನ್ವಯಿಸುತ್ತದೆ ಎಂದರು.
ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಶರಣರು, ದಾಸರು ಮತ್ತು ಸೂಫಿ ಸಂತರು ಎಲ್ಲ ವರ್ಗದ ಜನರನ್ನು ಒಂದುಗೂಡಿಸುವಲ್ಲಿ ಸಾಹಿತ್ಯ ರಚಿಸಿದ್ದಾರೆ, ಆಧ್ಯಾತ್ಮಿಕ, ಸಾಮಾಜಿಕ ಜಾಗೃತಿಯನ್ನು ಮೂಡಿಸಿದ್ದಾರೆ. ಇವೆರಡು ಸಾಹಿತ್ಯ ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದರು.ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಪಾಲಿಕೆಯ ವಿಪಕ್ಷ ನಾಯಕಿ ಶೋಭಾ ದೇಸಾಯಿ, ಸ್ವಾಗತ ಸಮಿತಿಯ ಮಲ್ಲಣ್ಣ ನಾಗರಾಳ, ಕೃಷ್ಣಾಜೀ ಕುಲಕರ್ಣಿ, ಕಸಾಪ ವಲಯ ಅಧ್ಯಕ್ಷ ರವಿಕುಮಾರ ಶಹಾಪೂರಕರ್, ಸಿದ್ಧಲಿಂಗ ಬಾಳಿ, ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ , ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಶರಣರಾಜ ಛಪ್ಪರಬಂದಿ , ಕಲ್ಯಾಣಕುಮಾರ ಶೀಲವಂತ, ಜಗದೀಶ ಮರಪಳ್ಳಿ ಮಾತನಾಡಿದರು.
ವಚನ- ದಾಸ ಸಾಹಿತ್ಯಗಳು ಜೀವನ ಕ್ರಮ
ಡಾ. ಶೈಲಜಾ ಕೊಪ್ಪ, ಪ್ರೊ. ಎಸ್.ಎಲ್. ಪಾಟೀಲ, ಸುರೇಶ ಗೌರೆ, ಚಂದ್ರಕಾಂತ ಏರಿ, ಜಗನ್ನಾಥ ಸೂರ್ಯವಂಶಿ, ಮಂಜುನಾಥ ಕಂಬಾಳಿಮಠ, ಗಂಗಾಧರ ಭಂಗರಗಿ, ಜಯಶ್ರೀ ಯಾದಗಿರಿ, ಮಲ್ಲಿನಾಥ ಸಂಗಶೆಟ್ಟಿ, ಸಂಗಪ್ಪ ಭೀಮಳ್ಳಿ, ಶಿವಕುಮಾರ ಸಿ.ಎಚ್., ಪ್ರಲ್ಹಾದ ಪೂಜಾರಿ, ದಾನೇಶ ಮಾಲಗತ್ತಿ ಇದ್ದರು.
ಸಮಾರೋಪ ನುಡಿಗಳನ್ನಾಡಿದ ಗುಲಬರ್ಗಾ ವಿ.ವಿ. ನಿವೃತ್ತ ಕುಲಪತಿ ಡಾ. ಪರಿಮಾಳ ಅಂಬೇಕರ್, ಇದ್ದ ವ್ಯವಸ್ಥೆಯನ್ನು ಮುರಿದು ಕಟ್ಟುವುದೇ ದಾಸ ಸಾಹಿತ್ಯದ ಉದ್ದೇಶವಾಗಿದೆ ಎಂದರು.