ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಕುರುಬರ ಸಂಘದ ವತಿಯಿಂದ ಸೋಮವಾರ ನಗರದ ಶ್ರೀ ಗುರುರಾಜ ಕಲ್ಯಾಣ ಮಂಟಪ ಮುಂಭಾಗದಲ್ಲಿ ನಡೆದ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕನಕದಾಸರು ಶ್ರೀಕೃಷ್ಣನ ಪರಮ ಭಕ್ತರಾದ್ದರಿಂದ ಅವರಿಗೂ ಉಡುಪಿಯ ಶ್ರೀಕೃಷ್ಣ ಮಠಕ್ಕೂ ಅವಿನಾಭಾವ ಸಂಬಂಧವಿದೆ ಎಂದರು.
ಜಾತಿ ಪದ್ಧತಿಗೆ ವಿರೋಧಕನಕದಾಸರು ಮೂಲತಃ ಕುರುಬ ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗಿದ್ದರು. ಉಡುಪಿ ಶ್ರೀ ಕೃಷ್ಣನ ದೇವಾಸ್ಥಾನದಲ್ಲಿ ವಿಶೇಷವಾಗಿ ಕನಕ ಕಿಂಡಿಯನ್ನು ಈಗಲೂ ಕಾಣಬಹುದು. ದಾಸಶ್ರೇಷ್ಠ ಶ್ರೀ ಕನಕದಾಸ ಅವರ ಕೀರ್ತನೆಗಳು, ಆಚಾರ, ವಿಚಾರಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾತಿ ಪದ್ಧತಿಯ ವಿರುದ್ದವಾಗಿ ಕೀರ್ತನೆಗಳ ಮೂಲಕ ತಮ್ಮ ನಿಲುವು ಪ್ರದಿಪಾದಿಸಿ ಪರಿವರ್ತನೆ ಹಾಗೂ ಸುಧಾರಣೆಗೆ ಶ್ರಮಿಸಿದವರು ಕನಕದಾಸರು ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಮಹಾನ್ ನಾಯಕರ ಜಯಂತಿಗಳನ್ನು ಚಿಕ್ಕಬಳ್ಳಾಪುರ ನಗರದಲ್ಲಿನ ಕನ್ನಡ ಭವನ ಕಟ್ಟಡದ ಭವ್ಯವಾದ ಸಭಾಂಗಣದಲ್ಲಿ ನಡೆಸಲಾಗುವುದು. ಜಿಲ್ಲಾ ಕೇಂದ್ರದಲ್ಲಿ ಕುರುಬ ಸಮುದಾಯ ಭವನ ನಿರ್ಮಾಣದ ಭರವಸೆ ನೀಡಿದರು.
ಪಲ್ಲಕ್ಕಿ ಮೆರವಣಿಗೆಗೆ ಚಾಲನೆ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ. ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಎನ್.ಭಾಸ್ಕರ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ,ತಹಸೀಲ್ದಾರ್ ಅನಿಲ್ ಕುಮಾರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿ ಕುಮಾರ್, ಚಿಕ್ಕಬಳ್ಳಾಪುರ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಎ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಎಂ.ಆನಂದ್ ಸಮುದಾಯದ ಪ್ರಮುಖ ಮುಖಂಡರು, ವಿದ್ಯಾರ್ಥಿಗಳು,ಸಾರ್ವಜನಿಕರು ಇದ್ದರು.