ಕಳೆಗುಂದಿದ ಯಾತ್ರೆ । ಮಹಿಳೆಯರಿಗಿಂತ ಪೊಲೀಸರ ಸಂಖ್ಯೆ ದುಪ್ಪಟ್ಟು। ಇಂದು ಚಿಕ್ಕಮಗಳೂರಿನಲ್ಲಿ ಶೋಭಾಯಾತ್ರೆ
ಪೊಲೀಸರ ಸಂಖ್ಯೆ ದ್ವಿಗುಣ:ಕಳೆದ ವರ್ಷದಲ್ಲಿ ಸಂಕೀರ್ತನಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರ ಸಂಖ್ಯೆ ಸುಮಾರು 3 ಸಾವಿರ ದಾಟಿತ್ತು. ಆದರೆ, ಈ ಬಾರಿ ಈ ಸಂಖ್ಯೆ ಒಂದು ಸಾವಿರದ ಗಡಿಯೂ ದಾಟಲಿಲ್ಲ. ಆದರೆ, ಪೊಲೀಸರ ಸಂಖ್ಯೆ ದ್ವಿಗುಣವಾಗಿತ್ತು. ಈ ಬಾರಿ ಸಂಕೀರ್ತನಾ ಯಾತ್ರೆ ಹಾಗೂ ಶೋಭಾಯಾತ್ರೆಯ ಹಿನ್ನಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಾಗಾಗಿ ಸಂಕೀರ್ತನಾ ಯಾತ್ರೆಯಲ್ಲಿ ಎಲ್ಲ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಸಂಕೀರ್ತನಾ ಯಾತ್ರೆ ಆರಂಭದಿಂದ ಅಂತ್ಯದವರೆಗೆ ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಸಾಗಿದರು. ದತ್ತಪೀಠಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು.
ಇಂದು ಶೋಭಾಯಾತ್ರೆ:ದತ್ತ ಜಯಂತಿ ಉತ್ಸವದ ಎರಡನೇ ದಿನವಾದ ಸೋಮವಾರ ಚಿಕ್ಕಮಗಳೂರಿನಲ್ಲಿ ಶೋಭಾಯಾತ್ರೆ ನಡೆಯಲಿದೆ.ಮಧ್ಯಾಹ್ನ ಇಲ್ಲಿನ ಶ್ರೀ ಕಾಮಧೇನು ಗಣಪತಿ ದೇವಾಲಯದಿಂದ ಹೊರಡಲಿರುವ ಶೋಭಾಯಾತ್ರೆ ಕೆಇಬಿ ವೃತ್ತ, ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತದ ಮೂಲಕ ಎಂ.ಜಿ. ರಸ್ತೆಯಲ್ಲಿ ತೆರಳಿ ಆಜಾದ್ ಪಾರ್ಕ್ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ.
ಚಿಕ್ಕಮಗಳೂರು: ದತ್ತಪೀಠದಲ್ಲಿ ಅಭಿವೃದ್ಧಿ ಕೆಲಸಗಳಾಗಗಿ, ಪೀಠ ಸಂಪೂರ್ಣವಾಗಿ ನಮ್ಮ ಸುಪರ್ದಿಗೆ ಬರಬೇಕು ಎಂಬುದು ಬಹಳ ವರ್ಷಗಳ ಬೇಡಿಕೆ. ಈಗ ಪೂಜೆಗೆ ಅವಕಾಶ ಸಿಕ್ಕಿರುವುದು ಸಂತೋಷ ಎಂದು ಕೇಂದ್ರದ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದತ್ತಪೀಠ ನಮ್ಮದಾಗಬೇಕೆಂಬ ಭಾವನೆ ಹಿಂದುಗಳಲ್ಲಿ ಇದೆ. ಅದು ನಮ್ಮ ಜತೆ ಮತ್ತೆ ಕಾನೂನಾತ್ಮಕವಾಗಿ ಬರಲಿದೆ ಎಂದರು. ದೇಶದ ಬೇರೆ ಬೇರೆ ಭಾಗದಲ್ಲಿರುವ ದತ್ತಭಕ್ತರು, ಇಲ್ಲಿಗೆ ಬಂದು ಹೋಗಬೇಕೆಂಬ ಅಪೇಕ್ಷೆ ನಮ್ಮದಾಗಿದೆ. ದತ್ತಪೀಠ ನಮ್ಮ ಸುಪರ್ದಿಗೆ ಬರಲಿದೆ ಎಂದು ಹೇಳಿದರು. 24 ಕೆಸಿಕೆಎಂ 1ದತ್ತ ಜಯಂತಿ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಭಾನುವಾರ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಿತು. ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸಿ.ಟಿ. ರವಿ ಇದ್ದರು.