- ಸಂಕೀರ್ತನಾ ಯಾತ್ರೆ, ಮೂರು ದಿನಗಳ ಉತ್ಸವಕ್ಕೆ ಇಂದು ಚಾಲನೆ, ನಾಳೆ ಚಿಕ್ಕಮಗಳೂರಿನಲ್ಲಿ ಶೋಭಾಯಾತ್ರೆ, ಖಾಕಿ ಪಡೆಯ ಸರ್ಪಗಾವಲು,
ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ದತ್ತಜಯಂತಿ ಉತ್ಸವಕ್ಕೆ ಮಂಗಳವಾರ ಅಧಿಕೃತ ಚಾಲನೆ ಸಿಗಲಿದೆ.
ದತ್ತ ಜಯಂತಿ ಉತ್ಸವದ ಹಿನ್ನಲೆಯಲ್ಲಿ ಚಿಕ್ಕಮಗಳೂರು ನಗರ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಪ್ರಮುಖ ರಸ್ತೆಗಳು ಕೇಸರಿ ಧ್ವಜ, ಬಂಟಿಂಗ್ಸ್ಗಳಿಂದ ಅಲಂಕಾರಗೊಂಡಿವೆ. ಎಲ್ಲೆಡೆ ಹಬ್ಬದ ವಾತಾವರಣ ಮೂಡಿದೆ.ದತ್ತ ಜಯಂತಿಯ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ದತ್ತಭಕ್ತರು ನ. 26 ರಂದು ದತ್ತಮಾಲೆ ಧರಿಸಿದ್ದು, ಈವರೆಗೆ ಐದು ದಿನಗಳ ಕಾಲ ವ್ರತವನ್ನು ಆಚರಿಸಿದ್ದಾರೆ. ಈ ಮೂರುಗಳ ಅವಧಿಯಲ್ಲಿ ಇನ್ನಷ್ಟು ಮಂದಿ ದತ್ತಮಾಲೆಯನ್ನು ಧರಿಸಲಿದ್ದಾರೆ. ಮೂರು ದಿನಗಳ ಉತ್ಸವಕ್ಕೆ ಮಂಗಳವಾರ ಚಾಲನೆ ಸಿಗಲಿದ್ದು, ಮೊದಲ ದಿನವಾದ ಮಂಗಳವಾರದಂದು ಅನುಸೂಯ ದೇವಿ ಜಯಂತಿ ನಡೆಯಲಿದೆ.
ಅಲ್ಲಿಂದ ಮಹಿಳೆಯರು ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿ, ದತ್ತಪಾದುಕೆಗಳ ದರ್ಶನ ಪಡೆದು, ಅನುಸೂಯ ದೇವಿಗೆ ಪೂಜೆ ಸಲ್ಲಿಸಿ, ಧಾರ್ಮಿಕ ವಿಧಿ ವಿಧಾನಗಳು ಮುಗಿದ ಬಳಿಕ ಅಲ್ಲಿಂದ ನಿರ್ಗಮಿಸಲಿದ್ದಾರೆ. ಎರಡನೇ ದಿನವಾದ ಬುಧವಾರದಂದು ಚಿಕ್ಕಮಗಳೂರಿನಲ್ಲಿ ಮಧ್ಯಾಹ್ನ ಶೋಭಾಯಾತ್ರೆ ನಡೆಯಲಿದೆ.ಬಂದೋಬಸ್ತ್:
ಜಿಲ್ಲೆಯಲ್ಲಿ ಈ ವರ್ಷ ಚಳಿಯ ಪ್ರಮಾಣ ಹೆಚ್ಚಳವಾಗಿದ್ದರಿಂದ 45 ವರ್ಷದೊಳಗಿನ ಪೊಲೀಸ್ ಸಿಬ್ಬಂದಿಯನ್ನು ಬೇರೆ ಜಿಲ್ಲೆ ಗಳಿಂದ ಕರೆಸಿಕೊಳ್ಳಲಾಗಿದೆ. ಜಿಲ್ಲೆಯ ಗಡಿ ಭಾಗ ಸೇರಿದಂತೆ ದತ್ತಪೀಠಕ್ಕೆ ತೆರಳುವ ಮಾರ್ಗಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ. 60ಕ್ಕೂ ಹೆಚ್ಚು ವಿಶೇಷ ದಂಡಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಅವರುಗಳು ನ. 30 ರಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪಶ್ಚಿಮ ವಲಯದ ಐಜಿ (ಪ್ರಭಾರಿ) ಡಾ. ಚಂದ್ರಗುಪ್ತ, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಇಲ್ಲಿನ ಡಿಎಆರ್ ಮೈದಾನದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಸಂಜೆ ಚಿಕ್ಕ ಮಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿ ಪಥ ಸಂಚಲನ ನಡೆಸಿದರು. 1 ಕೆಸಿಕೆಎಂ 3ದತ್ತ ಜಯಂತಿಯ ಹಿನ್ನಲೆಯಲ್ಲಿ ಕೇಸರಿ ಮಯವಾದ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತ.