ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಕುಟುಂಬಕ್ಕೆ ವಿಷ ಕೊಟ್ಟ ಸೊಸೆ

KannadaprabhaNewsNetwork |  
Published : Jun 09, 2025, 12:22 AM ISTUpdated : Jun 09, 2025, 12:23 AM IST
ಚೈತ್ರ | Kannada Prabha

ಸಾರಾಂಶ

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡ ಮತ್ತು ಆತನ ಕುಟುಂಬವನ್ನ ಮುಗಿಸಲು ಪತ್ನಿಯೊಬ್ಬಳು ಖತರ್ನಾಕ್​​ ಪ್ಲಾನ್​ ರೂಪಿಸಿದ್ದು, ಇಡೀ ಕುಟುಂಬಕ್ಕೆ ವಿಷದ ಮಾತ್ರೆ ಹಾಕಿ, ಇದೀಗ ಸಿಕ್ಕಿಬಿದ್ದಿದ್ದಾಳೆ. ಘಟನೆ ಸಂಬಂಧ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದು. ತನಿಖೆ ವೇಳೆ ಊಟಕ್ಕೆ ವಿಷ ಹಾಕಿರುವುದು ಬೆಳಕಿಗೆ ಬಂದಿದೆ. ಈ ವಿಷಯ ಮನೆಯವರಿಗೆ ತಿಳಿದರೆ ತೊಂದರೆಯಾಗುತ್ತದೆ ಎಂದು ಯೋಚಿಸಿದ್ದ ಚೈತ್ರ ತನ್ನ ಕುಟುಂಬದವರನ್ನು ಕೊನೆಗಾಣಿಸಲು ಪ್ಲಾನ್​ ರೂಪಿಸಿದ್ದಳು. ಪತಿ ಗಜೇಂದ್ರ, ಅತ್ತೆ-ಮಾವ ಅಷ್ಟೇ ಅಲ್ಲದೇ ಇಬ್ಬರು ಹೆತ್ತ ಮಕ್ಕಳಿಗೆ ಆಹಾರದಲ್ಲಿ ಮತ್ತಿನ ಮಾತ್ರೆ ಬೆರೆಸಿ ನಿಧಾನವಾಗಿ ವಿಷ ದೇಹ ಪ್ರವೇಶಿಸುವ ಯೋಜನೆ ರೂಪಿಸಿದ್ದಳು.​

ಕನ್ನಡಪ್ರಭ ವಾರ್ತೆ ಬೇಲೂರು

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡ ಮತ್ತು ಆತನ ಕುಟುಂಬವನ್ನ ಮುಗಿಸಲು ಪತ್ನಿಯೊಬ್ಬಳು ಖತರ್ನಾಕ್​​ ಪ್ಲಾನ್​ ರೂಪಿಸಿದ್ದು, ಇಡೀ ಕುಟುಂಬಕ್ಕೆ ವಿಷದ ಮಾತ್ರೆ ಹಾಕಿ, ಇದೀಗ ಸಿಕ್ಕಿಬಿದ್ದಿದ್ದಾಳೆ. ಘಟನೆ ಸಂಬಂಧ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದು. ತನಿಖೆ ವೇಳೆ ಊಟಕ್ಕೆ ವಿಷ ಹಾಕಿರುವುದು ಬೆಳಕಿಗೆ ಬಂದಿದೆ.

ಕೆರಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ 11 ವರ್ಷಗಳ ಹಿಂದೆ ಚೈತ್ರ ಮತ್ತು ಗಜೇಂದ್ರ ಮದುವೆಯಾಗಿದ್ದರು. ಇಬ್ಬರು ನೆಮ್ಮದಿಯಾಗಿಯೇ ಜೀವನ ಸಾಗಿಸುತ್ತಿದ್ದರು. ಇದಕ್ಕೆ ಸಾಕ್ಷಿಯೆಂಬಂತೆ ಮುದ್ದಾದ ಇಬ್ಬರು ಗಂಡು ಮಕ್ಕಳು ಜನಿಸಿದ್ದರು. ಕಳೆದ ಮೂರು ವರ್ಷಗಳಿಂದ ಚೈತ್ರ ಕೆರಲೂರು ಪುನೀತ್​ ಎಂಬಾತನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಈ ಅಕ್ರಮ ಸಂಬಂಧದ ವಿಷಯ ಪತಿಗೆ ತಿಳಿದು ಇಬ್ಬರ ನಡುವೆ ಜಗಳವಾಗಿತ್ತು. ನಂತರ ಊರಿನ ಹಿರಿಯರು ಸೇರಿ ರಾಜೀ ಪಂಚಾಯತಿ ಮಾಡಿಸಿ ಅಕ್ರಮ ಸಂಬಂಧ ಬಿಡಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಚೈತ್ರ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದ್ದಳು. ಅದೇ ಗ್ರಾಮದ ಶಿವು ಎಂಬಾತನ ಜೊತೆ ಮತ್ತೆ ಅಕ್ರಮ ಸಂಬಂಧ ಬೆಳೆಸಿದ್ದಳು.

ಈ ವಿಷಯ ಮನೆಯವರಿಗೆ ತಿಳಿದರೆ ತೊಂದರೆಯಾಗುತ್ತದೆ ಎಂದು ಯೋಚಿಸಿದ್ದ ಚೈತ್ರ ತನ್ನ ಕುಟುಂಬದವರನ್ನು ಕೊನೆಗಾಣಿಸಲು ಪ್ಲಾನ್​ ರೂಪಿಸಿದ್ದಳು. ಪತಿ ಗಜೇಂದ್ರ, ಅತ್ತೆ-ಮಾವ ಅಷ್ಟೇ ಅಲ್ಲದೇ ಇಬ್ಬರು ಹೆತ್ತ ಮಕ್ಕಳಿಗೆ ಆಹಾರದಲ್ಲಿ ಮತ್ತಿನ ಮಾತ್ರೆ ಬೆರೆಸಿ ನಿಧಾನವಾಗಿ ವಿಷ ದೇಹ ಪ್ರವೇಶಿಸುವ ಯೋಜನೆ ರೂಪಿಸಿದ್ದಳು.​

ತನ್ನ ಯೋಜನೆಯಂತೆ ಚೈತ್ರ ಊಟ, ಕಾಫಿಯಲ್ಲಿ ಮಾತ್ರೆಗಳನ್ನು ಬೆರೆಸಲು ಶುರು ಮಾಡಿದ್ದಳು. ಇದಕ್ಕೆ ಪ್ರಿಯಕರ ಶಿವುವಿನ ಸಹಾಯ ಪಡೆದಿದ್ದಳು. ಆದರೆ ವಿಷ ಮಿಶ್ರಿತ ಆಹಾರ ಸೇವಿಸಿದ ಕುಟುಂಬಸ್ಥರು ಅನಾರೋಗ್ಯಕ್ಕೆ ಒಳಗಾಗಿದ್ದರು. ಹೊಟ್ಟೆ ನೋವು, ಕೈಕಾಲು ಸೆಳೆತ, ನಿದ್ರೆ ಮಂಪರು ಎಂದು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಬಗ್ಗೆ ಮನೆಯಲ್ಲಿ ತಮ್ಮ ಪತ್ನಿ ಶೇಖರಣೆ ಮಾಡಿದ್ದ ಮಾತ್ರೆಗಳು ಹಾಗೂ ಚೀಟಿ ಬಗ್ಗೆ ಅನುಮಾನಗೊಂಡು ವೈದ್ಯರಿಗೆ ತೋರಿಸಿದ್ದರು. ವೈದ್ಯರು ಮಾತ್ರೆ ಹಾಗೂ ಚೀಟಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಇದು ಆರೋಗ್ಯಕ್ಕೆ ಹಾನಿಕಾರಕ ಮಾತ್ರೆಯಾಗಿದ್ದು ನಿಮಗೆ ಹೇಗೆ ದೊರಕಿತ್ತು ಎಂದು ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಪತ್ನಿ ಮೇಲೆ ಅನುಮಾನಗೊಂಡ ಪತಿ ಗಜೇಂದ್ರ, ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪತ್ನಿ ಚೈತ್ರಾಳನ್ನು ವಶಕ್ಕೆ ಪಡೆದ ಬೇಲೂರು ಪೊಲೀಸರು ವಿಚಾರಣೆ ನಡೆಸಿದಾಗ ಕೊಲೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈಗಾಗಲೇ ಆಕೆ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿದ್ದು, ಚೈತ್ರ ಜೈಲು ಪಾಲಾಗಿದ್ದಾಳೆ. ಇದಕ್ಕೆ ಸಹಕರಿಸಿದ ಪ್ರಿಯತಮ ನಾಪತ್ತೆಯಾಗಿದ್ದು ಪೊಲೀಸರು ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ