- ಎಲ್ಲರೂ ಸಹಕರಿಸಲು ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದ ಬೈಕ್ ರ್ಯಾಲಿ
ದಾವಣಗೆರೆ: ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುವುದು ಹಾಗೂ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ ವಿರೋಧಿಸಿ ಸೆ.1ರಂದು ಕರೆ ನೀಡಿರುವ ದಾವಣಗೆರೆ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಬೈಕ್ ರ್ಯಾಲಿ ನಡೆಸಿ, ಬಂದ್ಗೆ ಕೈ ಜೋಡಿಸುವಂತೆ ಜನತೆಗೆ ಮನವಿ ಮಾಡಲಾಯಿತು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಜಿಲ್ಲಾ ಕೇಂದ್ರದ ಪ್ರಮುಖ ವೃತ್ತ, ರಸ್ತೆಗಳು, ಮಾರುಕಟ್ಟೆ ಪ್ರದೇಶದಲ್ಲಿ ಸಂಚರಿಸಿ ರೈತಪರ, ಜನಪರ ಬಂದ್ಗೆ ವ್ಯಾಪಾರಸ್ಥರು, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಸ್ವಯಂಪ್ರೇರಣೆಯಿಂದ ಸ್ಪಂದಿಸಿ, ಹೋರಾಟ ಯಶಸ್ವಿಗೊಳಿಸುವಂತೆ ಕೋರಲಾಯಿತು.ಎಂ.ಪಿ.ರೇಣುಕಾಚಾರ್ಯ ಈ ಸಂದರ್ಭ ಮಾತನಾಡಿ, ಭದ್ರಾ ಡ್ಯಾಂನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ರಾತ್ರೋರಾತ್ರಿ 3 ಟಿಎಂಸಿ ನೀರು ಹರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ಮರಣ ಶಾಸನವಾಗಿದೆ. ಇದು ಬರೀ ಅಚ್ಚುಕಟ್ಟು ರೈತರಿಗಷ್ಟೇ ಅಲ್ಲ, ಭದ್ರಾ ಡ್ಯಾಂ ಅವಲಂಬಿತ ದಾವಣಗೆರೆ ನಗರ, ಜಿಲ್ಲೆಯ ಊರುಗಳ ಜನರ ಪಾಲಿಗೂ ಸಂಕಷ್ಟ ತಂದೊಡ್ಡುವ ಆದೇಶವಾಗಿದೆ. ಗುಟ್ಕಾ, ಪಾನ್ ಮಸಾಲಾ ನಿಷೇಧಿಸುವ ಮೂಲಕ ಅಡಕೆ ಬೆಳೆಗಾರರ ಅನ್ನಕ್ಕೂ ಕಲ್ಲು ಹಾಕುವ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ತಕ್ಷಣವೇ ಭದ್ರಾ ಡ್ಯಾಂನಿಂದ ಭದ್ರಾ ಮೇಲ್ದಂಡೆ ಯೋಜನೆಗೆ 3 ಟಿಎಂಸಿ ನೀರು ಹರಿಸುವ ಆದೇಶವನ್ನು ಹಿಂಪಡೆಯಬೇಕು ಎಂದರು.
- - -
- ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ.
-31ಕೆಡಿವಿಜಿ20, 21: