ಕ್ಯಾನ್ಸರ್ ರೋಗಿಗಳಿಗೆ ಡೇ ಕೇರ್‌ಕಿಮೋಥೆರಪಿ ಅನುಕೂಲಕರ: ಹಿಟ್ನಾಳ್

KannadaprabhaNewsNetwork |  
Published : Nov 15, 2025, 02:15 AM IST
14ಕೆಪಿಎಲ್24 ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ ಹುಬ್ಬಳ್ಳಿ ಸೂಪರ್ ಸ್ಪೆಷಾಲಟಿ ಆಸ್ಪತ್ರೆ ಇವರ ಸಹಯೋಗದೊಂದಿಗೆ ಪ್ರಾರಂಭಿಸಿರುವ ಬಡ ಕ್ಯಾನ್ಸರ್ ರೋಗಿಗಳ ಉಚಿತ ಡೇ ಕೇರ್ ಕಿಮೋಥೆರಪಿ ಚಿಕಿತ್ಸಾ ವಾರ್ಡ್ಗಳ ಉದ್ಘಾಟನೆ | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಜಿಲ್ಲೆಯ ಜನರಿಗೆ ಹೆಚ್ಚು ಅರಿವು ಕಾರ್ಯಕ್ರಮ ಮೂಡಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪಳ: ಕಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಡೇ ಕೇರ್ ಕಿಮೋಥೆರಪಿ ಚಿಕಿತ್ಸಾ ಸೇವೆ ಪ್ರಾರಂಭವಾಗಿರುವುದರಿಂದ ಭವಿಷ್ಯದಲ್ಲಿ ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೆ ಹಾಗೂ ಕುಟುಂಬಸ್ಥರಿಗೆ ಆರ್ಥಿಕ, ಮಾನಸಿಕ ಹಾಗೂ ವೈದ್ಯಕೀಯವಾಗಿ ಅನುಕೂಲವಾಗಲಿದೆ ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ್ ಹೇಳಿದರು.

ಅವರು ಬುಧವಾರ ಕೊಪ್ಪಳ ನಗರದ ಪ್ರತಿಷ್ಠಿತ ಆರೋಗ್ಯ ಸಂಸ್ಥೆಯಾದ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ ಹುಬ್ಬಳ್ಳಿ ಸೂಪರ್ ಸ್ಪೆಷಾಲಟಿ ಆಸ್ಪತ್ರೆ ಸಹಯೋಗದೊಂದಿಗೆ ಪ್ರಾರಂಭಿಸಿರುವ ಬಡ ಕ್ಯಾನ್ಸರ್ ರೋಗಿಗಳ ಉಚಿತ ಡೇ ಕೇರ್ ಕಿಮೋಥೆರಪಿ ಚಿಕಿತ್ಸಾ ವಾರ್ಡ್‌ಗಳನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ಜನರಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆಯು ಹೆಚ್ಚಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೂರದ ಬೆಂಗಳೂರು ಅಥವಾ ಹುಬ್ಬಳ್ಳಿಯಂತಹ ನಗರಗಳಿಗೆ ಅಲೆದಾಡುವ ಪರಿಸ್ಥಿತಿ ಇದೆ. ಆದರೆ ಕೊಪ್ಪಳ ಕಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಡೇ ಕೇರ್ ಕಿಮೋಥೆರಪಿ ಚಿಕಿತ್ಸಾ ಸೇವೆಗಳು ಪ್ರಾರಂಭವಾಗಿರುವುದರಿಂದ ಭವಿಷ್ಯದಲ್ಲಿ ಜಿಲ್ಲೆಯ ಕ್ಯಾನ್ಸರ್ ರೋಗಿಗಳು ದೂರದ ನಗರಗಳಿಗೆ ಚಿಕಿತ್ಸೆಗಾಗಿ ತೆರಳುವುದನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಣ ಮಾಡಬಹುದು. ಇದರಿಂದ ಅವರಿಗೆ ಆಗುವ ಆರ್ಥಿಕ ನಷ್ಟ ತಪ್ಪಿಸಬಹುದು ಎಂದು ತಿಳಿಸಿದರು.

ನಮ್ಮ ಜಿಲ್ಲೆಗೆ ಡೇ ಕೇರ್ ಕಿಮೋಥೆರಪಿ ಚಿಕಿತ್ಸಾ ಸೇವೆ ಪ್ರಾರಂಭಿಸಲು ಶ್ರಮಿಸಿದ ಕಿಮ್ಸ್ ನಿರ್ದೇಶಕ ಡಾ.ವಿಜಯನಾಥ ಇಟಗಿ ಹಾಗೂ ಆಡಳಿತ ತಂಡದ ಜತೆಗೆ ಹುಬ್ಬಳ್ಳಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಡಾ. ಜಗದೀಶ್ ತುಬಚಿ ಮತ್ತು ತಂಡಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಜಿಲ್ಲೆಯ ಜನರಿಗೆ ಹೆಚ್ಚು ಅರಿವು ಕಾರ್ಯಕ್ರಮ ಮೂಡಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಿಮ್ಸ್ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಬಿ.ಕಲ್ಲೇಶ, ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ ಸಾಲಿಮನಿ, ಶುಶ್ರೂಷಕ ಅಧೀಕ್ಷಕರಾದ ಸರಸ್ವತಿ, ನೋಡಲ್ ಅಧಿಕಾರಿ ಡಾ.ವೀರೇಶ, ಜಿ.ಸಿ. ಸದಸ್ಯ ಸಲೀಂ ಅಳವಂಡಿ ಮತ್ತು ಬೋಧಕ, ಬೋಧಕೇತರ ಹಾಗೂ ಶುಶ್ರೂಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಡಾ. ಆನಂದ ಚವ್ಹಾಣ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ