2028ರ ಅಧಿಕಾರದ ಹಗಲು ಕನಸು: ಮಂಜೇಗೌಡ

KannadaprabhaNewsNetwork |  
Published : Feb 20, 2026, 01:15 AM IST
ಸಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಕೋಮು ಭಾವನೆ ಬಿತ್ತಿ 2028ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಹಗಲು ಕನಸನ್ನು ಬಿಜೆಪಿ ಮುಖಂಡರು ಕಾಣುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ ಕಿಡಿಕಾರಿದ್ದಾರೆ.

ಕೆಳಮಟ್ಟದ ರಾಜಕಾರಣ ಬಿಡಬೇಕು: ಸಿ.ಟಿ.ರವಿ ವಿರುದ್ಧ ಕಿಡಿ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕೋಮು ಭಾವನೆ ಬಿತ್ತಿ 2028ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಹಗಲು ಕನಸನ್ನು ಬಿಜೆಪಿ ಮುಖಂಡರು ಕಾಣುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ ಕಿಡಿಕಾರಿದ್ದಾರೆ.

ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಿಳೆ ಮನೆ ಮೇಲೆ ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮ ಆಗಬೇಕು. ಪೊಲೀಸರ ತನಿಖೆಗೆ ಅವಕಾಶ ನೀಡಬೇಕು. ಅದನ್ನು ಬಿಟ್ಟು ದ್ವೇಷ ಭಾವಬಿತ್ತುವ ಮಾತು ಗಳನ್ನು ಆಡಬಾರದೆಂದು ಸಿ.ಟಿ.ರವಿ ವಿರುದ್ಧ ಕಿಡಿಕಾರಿದರು.

ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಪುಂಡರ ಹಾವಳಿ ಹೆಚ್ಚಿದೆ. ಸಿ.ಟಿ.ರವಿ ತಮ್ಮ ಶಿಷ್ಯರಿಗೆ ಕಡಿವಾಣ ಹಾಕಬೇಕು. ಕೆಳಮಟ್ಟದ ರಾಜಕಾರಣ ಬಿಡಬೇಕು. ರಾಜಕೀಯ ಬೆಳೆ ಬೇಯಿಸಲು ಈ ರೀತಿ ಕೋಮು ಸಂಘರ್ಷ ಸೃಷ್ಟಿ ಸರಿಯಲ್ಲ ಎಂದರು.

ಸಂವಿಧಾನ ಆಶಯದಂತೆ ಸಮಸಮಾಜ ನಿರ್ಮಾಣದ ಗುರಿ ಹೊಂದಿದ ಶಾಸಕ ಎಚ್.ಡಿ. ತಮ್ಮಯ್ಯ ವಿರುದ್ಧ ರಾಜಕೀಯ ಪಿತೂರಿಯನ್ನು ಬಿಜೆಪಿ ಮುಖಂಡರು ನಿಲ್ಲಿಸಬೇಕು.

ಶಾಸಕ ಎಚ್.ಡಿ. ತಮ್ಮಯ್ಯ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದು, ಐಜಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ದಲಿತ ವಿರೋಧಿ ಬಿಜೆಪಿಗೆ ಇತ್ತೀಚೆಗೆ ದಲಿತರ ಮೇಲೆ ಕಾಳಜಿ ಮೂಡಿದೆ ಎಂಬುದು ಅನುಮಾನಕ್ಕೆಡೆಮಾಡಿದೆ. ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಮೇಲೆ ಹಲ್ಲೆ ನಡೆದಾಗ ಕುರುವಂಗಿ ವೆಂಕಟೇಶ್ ಎಲ್ಲಿದ್ದರು ಎಂಬ ಬಗ್ಗೆ ತಿಳಿಸಲಿ ಒತ್ತಾಯಿಸಿದರು.

ಪ್ರವಾಸೋದ್ಯಮ ಕ್ಷೇತ್ರ ಜಿಲ್ಲೆ ಚಿಕ್ಕಮಗಳೂರು ನಗರದಲ್ಲಿ ಕೋಮು ಸಂಘರ್ಷ ನಡೆಯುತ್ತಿದ್ದರೆ ಪ್ರವಾಸಿಗರು ಭಯಭೀತ ರಾಗುತ್ತಾರೆ. ನಗರದಲ್ಲಿ ಶಾಂತಿ ನೆಲೆಸುವಂತೆ ಸರ್ವರೂ ನಡೆದುಕೊಳ್ಳಬೇಕೆಂದು ಹೇಳಿದರು.

ಈ ವೇಳೆ ಪ್ರಚಾರ ಸಮಿತಿ ಅಧ್ಯಕ್ಷ ಪ್ರವೀಣ್ ಬೆಟಗೆರೆ, ಕೆಪಿಸಿಸಿ ನೀತಿ ಸಂಶೋಧನಾ ವಿಭಾಗದ ಜಿಲ್ಲಾಧ್ಯಕ್ಷ ಶಿವಕುಮಾರ್ ಹಿರೇಗೌಜ, ನಗರಸಭೆ ಸದಸ್ಯ ಸಿ.ಪಿ ಲಕ್ಷ್ಮಣ, ಯುವ ಕಾಂಗ್ರೆಸ್ ಅಧ್ಯಕ್ಷ ಲಾಕೇಶ್, ಸಿಡಿಎ ನಾಮಿನಿ ಸದಸ್ಯರಾದ ನೂರ್ ಅಹಮದ್, ಪರಮೇಶ್, ಯೋಗೀಶ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಮೂರು ದಿನ ಫಲಪುಷ್ಪ ಪ್ರದರ್ಶನ: ಜಿಪಂ ಸಿಇಒ ಡಾ.ಆಕಾಶ್
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮರಳಿ ತರಲು ಆಗ್ರಹ