ಕನ್ನಡಪ್ರಭ ವಾರ್ತೆ, ದಾವಣಗೆರೆ
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಒಟ್ಟು 18892 ಶುದ್ಧ ನೀರಿನ ಘಟಕ ಸ್ಥಾಪಿಸಲಾಗಿದೆ. ಇವುಗಳಲ್ಲಿ ಬರೋಬ್ಬರಿ 1980 ಘಟಕ ಕೆಟ್ಟು ಸ್ಥಗಿತವಾಗಿದೆ. ದಾವಣಗೆರೆ ಜಿಲ್ಲೆಯಲ್ಲೂ 600 ಶುದ್ಧ ನೀರಿನ ಘಟಕಗಳ ಪೈಕಿ 100 ಘಟಕ ಹಾಳಾಗಿವೆ. ಆದರೆ, ದುರಸ್ತಿಪಡಿಸುವ, ಶುದ್ಧ ನೀರು ಪೂರೈಸುವ ಕೆಲಸವಾಗುತ್ತಿಲ್ಲ ಎಂದರು.
ಮನೆ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸಿ, ನೀರು ಪೂರೈಸುವ ಮೂಲಕ ಮನೆ ಮನೆಗೆ ಗಂಗೆ ವಿಶೇಷ ಯೋಜನೆ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿದ್ದಾರೆ. ನೀರಾವರಿ ಸಚಿವಾಲಯದ ಜಲಶಕ್ತಿ ಅಭಿಯಾನದಡಿ ಜಲಜೀವನ ಮಿಷನ್ನಡಿ 2019- 2020ನೇ ಸಾಲಿನಿಂದ ಈವರೆಗೆ ಜಿಲ್ಲೆಯ 691 ಹಳ್ಳಿ ಪೈಕಿ, 302 ಹಳ್ಳಿಯ ಎಲ್ಲ ಮನೆಗೆ ನೀರಿನ ಸಂಪರ್ಕ ಕಲ್ಪಿಸಿ, ಈ ಹಳ್ಳಿಗಳಲ್ಲಿ ಹರ್ ಘರ್ ಜಲ್ ಎಂಬುದಾಗಿ ಘೋಷಣೆ ಮಾಡಲಾಗಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ನೀರು ಪೂರೈಸುವ ಕೆಲಸವನ್ನೇ ಸರಿಯಾಗಿ ಮಾಡುತ್ತಿಲ್ಲ ಎಂದು ದೂರಿದರು.ಭದ್ರಾ ಜಲಾಶಯದಿಂದ ಜಿಲ್ಲೆಯ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ಹರಿದಿಲ್ಲ. ಇದರಿಂದ ಕೊಳವೆಬಾವಿಗಳ ನೀರು ಕಡಿಮೆಯಾಗಿ, ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ಆದರೆ, ಸಚಿವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ದೂರದೃಷ್ಟಿ ಕೊರತೆಯಿಂದ ಐಸಿಸಿ ಸಭೆಗೆ ಗೈರಾಗಿದ್ದಾರೆ. ಈಗ ಜಿಪಂ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಚ್ಚುಕಟ್ಟು ಕೊನೆ ಭಾಗಕ್ಕೂ ನೀರು ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಟೀಕಿಸಿದರು.
ಬಿಜೆಪಿ ಮುಖಂಡರಾದ ಪಾಲಿಕೆ ಸದಸ್ಯ ಆರ್.ಶಿವಾನಂದ, ಬೇತೂರು ಸಂಗನಗಡ, ಶ್ಯಾಗಲೆ ದೇವೇಂದ್ರಪ್ಪ, ಕರಿಲಕ್ಕೇನಹಳ್ಳಿ ಓಂಕಾರಪ್ಪ, ಆರನೇ ಕಲ್ಲು ವಿಜಯಕುಮಾರ ಇತರರು ಇದ್ದರು.
- - --22ಕೆಡಿವಿಜಿ61:
ದಾವಣಗೆರೆಯಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.