ಹಂಪಿಯ ದೇಗುಲಕ್ಕೆ ಸಾಂಪ್ರದಾಯಿಕ ಉಡುಗೆ ಧರಿಸುವಂತೆ ಜಾಗೃತಿ

KannadaprabhaNewsNetwork |  
Published : Jan 27, 2024, 01:15 AM IST
26ಎಚ್‌ಪಿಟಿ7- ಹಂಪಿಯ ಶ್ರೀವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಶಾಸಕ ಎಚ್.ಆರ್‌. ಗವಿಯಪ್ಪನವರು ಸಾಂಪ್ರದಾಯಿಕ ಉಡುಗೆ ಧರಿಸಲು ಮನವಿ ಮಾಡಿದರು. | Kannada Prabha

ಸಾರಾಂಶ

ಹಂಪಿಯ ದೇಗುಲದಲ್ಲಿ ಸಾಂಪ್ರದಾಯಿಕ ಉಡುಗೆ ತೊಡುವಂತೆ ಜಿಲ್ಲಾಡಳಿತದಿಂದ ಜಾಗೃತಿ ಮೂಡಿಸಲಾಗುತ್ತಿದೆ.

ಹೊಸಪೇಟೆ: ಪ್ರಸಿದ್ಧ ಪ್ರವಾಸಿ ತಾಣವಾದ ವಿಜಯನಗರ ಜಿಲ್ಲೆಯ ಹಂಪಿಗೆ ಬರುವ ಪ್ರವಾಸಿಗರು ಹಾಗೂ ಭಕ್ತಾದಿಗಳಲ್ಲಿ ಭಕ್ತಿ ಭಾವನೆ ಮೂಡಿಸುವ ಸದುದ್ದೇಶದಿಂದ ಜಿಲ್ಲಾಡಳಿತವು ಹೊಸ ಹಜ್ಜೆ ಇರಿಸಿದೆ. ದೇವಸ್ಥಾನಗಳಲ್ಲಿ ಸಾಂಪ್ರದಾಯಿಕ ಬಟ್ಟೆ ಧರಿಸಲು ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಅವರು ಶುಕ್ರವಾರ ವಿರೂಪಾಕ್ಷೇಶ್ವರನ ಸನ್ನಿಧಿಯಲ್ಲಿ ತಾವೇ ಖುದ್ದು ಭಕ್ತರಿಗೆ, ಪ್ರವಾಸಿಗರಿಗೆ ಪಂಚೆ, ಶಲ್ಯ ನೀಡಿ, ತುಂಡುಡುಪು ಧರಿಸಿ ದೇವಸ್ಥಾನ ಪ್ರವೇಶಿಸದಂತೆ ಜಾಗೃತಿ ಮೂಡಿಸಿದರು.

ಈ ಮೂಲಕ ಜನರಲ್ಲಿ ದೇವಾಲಯದ ಬಗ್ಗೆ ಭಕ್ತಿ, ಭಾವನೆ ಬರುವಂತೆ ಇತರರಿಗೆ ಪ್ರೇರೇಪಣೆ ನೀಡಿ, ಜೀನ್ಸ್ ಪ್ಯಾಂಟ್ ಮತ್ತು ಬರ್ಮುಡಾ ತೊಟ್ಟು ಬಂದ ಭಕ್ತರೊಂದಿಗೆ ಆತ್ಮೀಯವಾಗಿ ಮಾತನಾಡಿದರು. ಹಂಪಿಯು ಬರೀ ಪ್ರವಾಸಿತಾಣವಲ್ಲ, ಅದು ವಿರೂಪಾಕ್ಷೇಶ್ವರ ದೇವರ ಪವಿತ್ರ ತಾಣವೂ ಆಗಿದೆ ಎಂದು ಮನವರಿಕೆ ಮಾಡಿದರು. ಸಾಂಪ್ರದಾಯಿಕ ಶೈಲಿಯ ಬಟ್ಟೆ ಧರಿಸಿ ದೇವರ ದರ್ಶನ ಪಡೆಯಲು ತಿಳಿಸಿ ಜನಜಾಗೃತಿ ಮೂಡಿಸಿದರು.

ಇದೀಗ ದೇವಸ್ಥಾನವನ್ನು ಸಂಪೂರ್ಣ ಗಣಕೀಕರಣಗೊಳಿಸುವುದಕ್ಕೆ ಸಹ ಜಿಲ್ಲಾಧಿಕಾರಿ ವಿಶೇಷ ಕ್ರಮ ವಹಿಸಿದ್ದು, ಮೊದಲನೇಯದಾಗಿ ಶಾಸಕರಿಂದಲೇ ಹಣ ಪಡೆದು ಗಣಕೀಕೃತ ರಸೀದಿ ನೀಡಿ ಸೇವೆಗೆ ಜಿಲ್ಲಾಧಿಕಾರಿ ಅವಕಾಶ ಕಲ್ಪಿಸಿದರು. ಇದರಿಂದ ಸೋರಿಕೆ ತಡೆದು ದೇವಸ್ಥಾನಕ್ಕೆ ಹೆಚ್ಚಿನ ಆದಾಯ ಬರುವಂತಾಗಲಿದೆ. ಜತೆಗೆ ದೇವಸ್ಥಾನದಲ್ಲಿ ಮೆಟಲ್ ಡಿಟೆಕ್ಟರ್‌ ಕೂಡಾ ಅಳವಡಿಸಲು ಜಿಲ್ಲಾಡಳಿತ ಕ್ರಮ ವಹಿಸಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಮಧ್ಯಾಹ್ನ 3ಕ್ಕೆ ಪಿಯುಸಿ ಫಲಿತಾಂಶ
ಕಾಡುಪ್ರಾಣಿಗಳ ಸಂತಾನಶಕ್ತಿ ಹರಣಕ್ಕೆ ರಾಜ್ಯ ಸರ್ಕಾರದಿಂದ ಚಿಂತನೆ: ಖಂಡ್ರೆ