ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಡಿಸಿ, ಸಿಇಒ ಸನ್ಮಾನ

KannadaprabhaNewsNetwork |  
Published : Apr 16, 2026, 03:00 AM IST
ಬಿಸಿಎಂ ವ್ಯಾಪ್ತಿಯ ಪಿಯು ದ್ವಿತೀಯ ವರ್ಷದ ವಿದ್ಯಾರ್ಥಿಗಳ ಸಾಧನೆಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಡಿಸಿ, ಸಿಇಒ ಸನ್ಮಾನ  | Kannada Prabha

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಸತಿ ಕಾಲೇಜು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿ.ಪಂ ಸಿಇಒ ಶಶಿಧರ ಕುರೇರ ಸನ್ಮಾನಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ:

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಸತಿ ಕಾಲೇಜು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿ.ಪಂ ಸಿಇಒ ಶಶಿಧರ ಕುರೇರ ಸನ್ಮಾನಿಸಿದರು.

ವಿಜ್ಞಾನ ವಿಭಾಗದಲ್ಲಿ ಬಾಗಲಕೋಟೆ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ (ಬಾಲಕರ ವಿಭಾಗದಲ್ಲಿ) ಭೀಮಪ್ಪ ಬಿರ್ಲಿ 600ಕ್ಕೆ 590 ಅಂಕ (ಶೇ.98.33) ಪಡೆದರೆ, ಹರೀಶ ಬಾಲರಡ್ಡಿ 600ಕ್ಕೆ 583 ಅಂಕ (ಶೇ.97.17), ಸಂಗಮೇಶ ಪಟ್ಟಣದ 600ಕ್ಕೆ 580 ಅಂಕ (ಶೇ.96.67) ಪಡೆದುಕೊಂಡಿದ್ದಾರೆ.

ಕಲಾ ವಿಭಾಗದಲ್ಲಿ ದೇವಮ್ಮ ಯಡಹಳ್ಳಿ 600ಕ್ಕೆ 594 ಅಂಕ (ಶೇ.99), ಶ್ವೇತಾ ಹೊರಕೇರಿ 600ಕ್ಕೆ 579 ಅಂಕ (ಶೇ.96.50), ವಾಣಿಜ್ಯ ವಿಭಾಗದಲ್ಲಿ ಸಂಗೀತಾ ಗಾಡದಾರ 600ಕ್ಕೆ 593 ಅಂಕ (ಶೇ.98.83), ಲಕ್ಷ್ಮೀ ಭೂಮಾರ 600ಕ್ಕೆ 587 ಅಂಕ (ಶೇ.97.83), ತೇಜಶ್ವಿನಿ ದೊರೆಗೊಳ 600ಕ್ಕೆ 577 ಅಂಕ (ಶೇ.96.17) ಅಂಕ ಪಡೆದುಕೊಂಡವರನ್ನು ಸನ್ಮಾನಿಸಲಾಯಿತು.

ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಂಗಪ್ಪ ಅವರು, ವಿದ್ಯಾರ್ಥಿಗಳು ಸಾಧಿಸಿರುವ ಉತ್ತಮ ಫಲಿತಾಂಶ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಕಠಿಣ ಪರಿಶ್ರಮ ಹಾಗೂ ಶಿಸ್ತುಬದ್ದ ಅಧ್ಯಯನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದರು. ಜಿ.ಪಂ ಸಿಇಓ ಶಶಿಧರ ಕುರೇರ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸರ್ಕಾರ ನೀಡುತ್ತಿರುವ ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.

ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಂಚಿತ, ದುರ್ಬಲ ವರ್ಗಗಳ ಧ್ವನಿ ಅಂಬೇಡ್ಕರ್‌
ರೈತರ ವಿವಿಧ ಸಮಸ್ಯೆ ಈಡೇರಿಸಲು ಅಗ್ರಹ