ಕನ್ನಡಪ್ರಭ ವಾರ್ತೆ ಮಡಿಕೇರಿ
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಎಮ್ಮೆಮಾಡು ಶಾಲೆ ಅಭಿವೃದ್ಧಿಗೆ ಸಿಎಸ್ಆರ್ ನಿಧಿಯಿಂದ ಅನುದಾನ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಸಮಿತಿ ಸದಸ್ಯರಾದ ಖಾಲೀದ್ ಅವರು ಹಾಕತ್ತೂರು ಶಾಲೆ ಅಭಿವೃದ್ಧಿ, ಕೊಡ್ಲಿಪೇಟೆ ವಸತಿ ಶಾಲೆಗಳಿಗೆ ಮತ್ತಷ್ಟು ಮೂಲ ಸೌಲಭ್ಯ ಕಲ್ಪಿಸಬೇಕಿದೆ ಎಂದು ಕೋರಿದರು. ಕೃಷಿ ಇಲಾಖೆಯಿಂದ ಒದಗಿಸಲಾಗುವ ಕೃಷಿ ಹೊಂಡವನ್ನು ಎಲ್ಲೆಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಮಾಹಿತಿಯ ಪಟ್ಟಿ ಒದಗಿಸಬೇಕು. ಇದರಲ್ಲಿ ಅಲ್ಪಸಂಖ್ಯಾತರ ಕುಟುಂಬದವರು ಎಷ್ಟು ಮಂದಿ ಇದ್ದಾರೆ. ಈ ಬಗ್ಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಮತ್ತೊಬ್ಬ ಸಮಿತಿ ಸದಸ್ಯರಾದ ಇಸ್ಮಾಯಿಲ್ ಮಾತನಾಡಿದರು.ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳ ಏರ್ಪಡಿಸಿ ಉದ್ಯೋಗ ಕಲ್ಪಿಸುವಂತಾಗಬೇಕು. ಉದ್ಯೋಗ ಮೇಳವನ್ನು ಪರಿಣಾಮಕಾರಿಯಾಗಿ ಏರ್ಪಡಿಸಿ ಉದ್ಯೋಗ ಕಲ್ಪಿಸಲು ಮುಂದಾಗುವಂತೆ ಉದ್ಯೋಗ ವಿನಿಮಯ ಅಧಿಕಾರಿಗೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಸದಸ್ಯರಾದ ಅಬ್ದುಲ್ ನಿಯಾಸ್, ಇಸ್ಮಾಯಿಲ್, ಖಾಲೀದ್ ಹಾಜಿ, ಸೂಫಿಯಾನ್ ಅವರು ಬ್ಯಾಂಕ್ಗಳ ಮೂಲಕ ಸಕಾಲದಲ್ಲಿ ಅಲ್ಪಸಂಖ್ಯಾತರಿಗೆ ಸಾಲ ಸೌಲಭ್ಯ ಕಲ್ಪಿಸಬೇಕು. ಇದರಿಂದ ಸಣ್ಣ ಪುಟ್ಟ ವ್ಯಾಪಾರಕ್ಕೆ ಸಹಕಾರಿಯಾಗಲಿದೆ. ಹಾಗೆಯೇ ವಿವಿಧ ಇಲಾಖೆಗಳ ಪ್ರಗತಿ ಸಕಾಲದಲ್ಲಿ ಸಾಧಿಸಬೇಕು. ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ದೊರೆಯುವಂತಾಗಬೇಕು. ಅಲ್ಪಸಂಖ್ಯಾತರು ಸಹ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಲು ಸರ್ಕಾರದ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಸಮಿತಿ ಸದಸ್ಯರು ಕೋರಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಲಹೆ ಮಾಡಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಹಿರಿಯ ಪೊಲೀಸ್ ಅಧಿಕಾರಿ ಐ.ಪಿ.ಮೇದಪ್ಪ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಜಿಲ್ಲಾ ಉದ್ಯೋಗ ವಿನಿಮಾಯಾಧಿಕಾರಿ ಮಂಜುನಾಥ್, ಸ್ವಚ್ಛ ಭಾರತ ಅಭಿಯಾನ ನೋಡಲ್ ಅಧಿಕಾರಿ ಜೀವನ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಎಂಜಿನಿಯರ್ ಸೂರಕೋಡ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಸಚಿನ್, ವಕ್ಫ್ ಅಧಿಕಾರಿ ಇರ್ಫಾನ್, ಇತರರು ಇದ್ದರು.