ಕನ್ನಡಪ್ರಭ ವಾರ್ತೆ ಉಡುಪಿ
ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ - 2024ಕ್ಕೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯದ ಪೂರ್ವ ತಯಾರಿಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ವಿದ್ಯಾ ಸಂಸ್ಥೆಯಲ್ಲಿ ಜೂನ್ 4 ರಂದು ಮತ ಎಣಿಕೆ ಕಾರ್ಯವು ನಡೆಯಲಿದ್ದು, ಚುನಾವಣಾ ಆಯೋಗವು ನೀಡಿರುವ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡದೆ ಮತ ಎಣಿಕೆ ಕಾರ್ಯವನ್ನು ನಡೆಸಬೇಕೆಂದು ತಿಳಿಸಿದರು.ಮತ ಎಣಿಕಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ನಿಗದಿಪಡಿಸಿರುವ ಕಾಲಾವಧಿಯಲ್ಲಿ ಉಪಸ್ಥಿತರಿರಬೇಕು. ಅಂದು ಮುಂಜಾನೆ 5 ಗಂಟೆಗೆ ಮತ ಎಣಿಕಾ ಸಿಬ್ಬಂದಿ ಯಾವ ಕೊಠಡಿಯ ಟೇಬಲ್ನಲ್ಲಿ ಕಾರ್ಯನಿರ್ವಹಿಸಬೇಕೆಂದು ಸಿಬ್ಬಂದಿಯನ್ನು ರ್ಯಾಂಡಮೈಸೇಶನ್ ಮಾಡುವ ಮೂಲಕ ನಿಯೋಜಿಸಲಾಗುವುದು. ಮತ ಎಣಿಕೆ ಕಾರ್ಯವು ಬೆಳಗ್ಗೆ 8 ಗಂಟೆಗೆ ಸರಿಯಾಗಿ ಪ್ರಾರಂಭವಾಗಲಿದೆ ಎಂದರು.
ಮತ ಎಣಿಕಾ ಕೊಠಡಿಯಲ್ಲಿ ಎರಡು ಟೇಬಲ್ಗೆ ಒಂದು ಸಿ.ಸಿ.ಟಿ.ವಿ ಯನ್ನು ಅಳವಡಿಸಬೇಕು ಹಾಗೂ ಮಹಡಿ ಮೇಲಿರುವ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳಿಗೆ ಸಿ.ಸಿ.ಟಿ.ವಿ ಅಳವಡಿಸಲು ಈಗಾಗಲೇ ಚುನಾವಣಾ ಆಯೋಗ ನಿರ್ದೇಶನ ನೀಡಿದ್ದು, ಅದನ್ನು ಪಾಲಿಸಬೇಕು ಎಂದು ಹೇಳಿದರು.
ಮತದಾನ ಕೇಂದ್ರದಲ್ಲಿ ನಿರಂತರ ವಿದ್ಯುಚ್ಛಕ್ತಿ ಸೌಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಯಾವುದೇ ರೀತಿಯ ದುರಸ್ಥಿ ಮತ್ತಿತರ ತುರ್ತು ಕಾರ್ಯಗಳಿಗೆ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕೆಂದು ತಿಳಿಸಿದರು.
ಮತ ಎಣಿಕಾ ಕೇಂದ್ರದಲ್ಲಿ ಮಾಧ್ಯಮದವರಿಗೆ ಮಾಹಿತಿಗಳನ್ನು ಪಡೆದು, ನೀಡಲು ಅನುಕೂಲವಾಗುವಂತೆ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗುವುದು. ಸುದ್ದಿ ಬಿತ್ತರಿಸಲು ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಕಲ್ಪಿಸಿ ಕೊಡಬೇಕೆಂದು ತಿಳಿಸಿದರು.
ಮತ ಎಣಿಕಾ ಕೇಂದ್ರಕ್ಕೆ ಅಭ್ಯರ್ಥಿಗಳು, ಅಭ್ಯರ್ಥಿಗಳ ಏಜೆಂಟರು, ಅಧಿಕಾರಿಗಳು, ಸಿಬ್ಬಂದಿ ತೆರಳಲು ಪ್ರತ್ಯೇಕ ಗೇಟ್ ಮೂಲಕ ವ್ಯವಸ್ಥೆ ಮಾಡಬೇಕು. ಅವುಗಳ ಮೂಲಕವೇ ಬರುವಂತೆ ಪೊಲೀಸ್ ಅಧಿಕಾರಿಗಳು ನೋಡಿಕೊಳ್ಳಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕಾ ಕೇಂದ್ರಕ್ಕೆ ಅಭ್ಯರ್ಥಿ ಪರ ಏಜೆಂಟರುಗಳು ಮೊಬೈಲ್ಗಳನ್ನು ಕೊಂಡೊಯ್ದಿದ್ದರು ಎಂಬ ಬಗ್ಗೆ ತಿಳಿದುಬಂದಿದೆ. ಈ ಬಾರಿ ಹಾಗಾಗದಂತೆ ಎಚ್ಚರಿಕೆ ವಹಿಸಬೇಕೆಂದರು.
ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಮತ ಎಣಿಕಾ ಕಾರ್ಯಕ್ಕೆ ಬರುವ ಅಲ್ಲಿನ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತಂಗಲು ಕೊಠಡಿ ವ್ಯವಸ್ಥೆ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.