ಕನ್ನಡಪ್ರಭ ವಾರ್ತೆ ಮಂಗಳೂರು
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2017ರಿಂದ ನೋಂದಣಿಯಾದ ಎಲ್ಲ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು ಮಾಲೀಕರು ಅಫಿಧಾವಿತ್ ಸಲ್ಲಿಸಬೇಕು ಎಂದು ಅವರು ಆರ್ಟಿಒಗೆ ನಿರ್ದೇಶಿಸಿದರು.ಸ್ಟೇಟ್ಬ್ಯಾಂಕ್ ವೃತ್ತ ಸಮಸ್ಯೆ: ನಗರದ ಹೃದಯಭಾಗದ ಸ್ಟೇಟ್ ಬ್ಯಾಂಕ್ ಹ್ಯಾಮಿಲ್ಟನ್ ವೃತ್ತವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ವಾಹನ ಸವಾರರು ತೀವ್ರ ಗೊಂದಲಕ್ಕೀಡಾಗುತ್ತಿದ್ದಾರೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದರು. ಇಡೀ ವೃತ್ತವನ್ನು ಸಮಗ್ರವಾಗಿ ಪುನರ್ನಿರ್ಮಿಸಿ ಸಂಚಾರ ವ್ಯವಸ್ಥೆ ಏರ್ಪಡಿಸಲು ಆಗ್ರಹಿಸಿದರು.
ಜಿಲ್ಲಾಧಿಕಾರಿ ಮಾತನಾಡಿ, ಡಿ.ಸಿ. ಕಚೇರಿಯ ಮುಂದಿನ ವೃತ್ತವೇ ಈ ರೀತಿ ಅನಿಶ್ಚಿತತೆ ಸ್ಥಿತಿಯಲ್ಲಿ ನಿಲ್ಲಿಸಿರುವುದು ಸರಿಯಲ್ಲ. ಈ ವೃತ್ತದ ಸುತ್ತಮುತ್ತಲಿನಲ್ಲಿ ಪಾರ್ಕಿಂಗ್, ಫ್ಲೆಕ್ಸ್, ಕಟೌಟ್ ಸಮಸ್ಯೆಯೂ ಇದೆ. ಯಾವುದೇ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯವಾಗಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಇನ್ನೊಂದು ಸಮಸ್ಯೆ ಸೃಷ್ಟಿಯಾಗಬಾರದು. ಈ ನಿಟ್ಟಿನಲ್ಲಿ ನಗರಪಾಲಿಕೆ, ನಗರ ಪೊಲೀಸ್ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಸೇರಿ ಸಮನ್ವಯದಿಂದ ಸ್ಟೇಟ್ಬ್ಯಾಂಕ್ ವೃತ್ತ ಸಂಚಾರ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಉಪ ಪೊಲೀಸ್ ಆಯುಕ್ತ ದಿನೇಶ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ಆರ್ಟಿಒ ಶ್ರೀಧರ್ ಮಲ್ನಾಡ್, ಲೋಕೋಪಯೋಗಿ ಕಾರ್ಯಕಾರಿ ಎಂಜಿನಿಯರ್ ಅಮರನಾಥ್ ಜೈನ್ ಮತ್ತಿತರರು ಇದ್ದರು.