ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಕನ್ನಡಪ್ರಭ ವಾರ್ತೆ ಬಳ್ಳಾರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನದಿ ಪಾತ್ರದ ಗ್ರಾಮಗಳ ಕಡೆ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು. ಸಂಭವನೀಯ ನೀರು ಮುಳುಗಡೆಯಾಗುವ ಗ್ರಾಮಗಳನ್ನು ಗುರುತಿಸಬೇಕು. ಕಂಪ್ಲಿ ಮತ್ತು ಸಿರುಗುಪ್ಪ ತಾಲೂಕು ಭಾಗದಲ್ಲಿ ಹೆಚ್ಚು ಜಾಗೃತಿ ನೀಡಬೇಕು. ಕುರುಗೋಡು ಭಾಗದ ಸಿದ್ದಮ್ಮನಹಳ್ಳಿ ಗ್ರಾಮದಲ್ಲಿ ಹೆಚ್ಚಾಗಿ ಮಳೆ ಸುರಿದರೆ, ನಡು ಗ್ರಾಮದ ಸೇತುವೆ ಮುಳುಗಡೆಯಾಗಲಿದ್ದು, ಈ ಕುರಿತು ಎಚ್ಚರಿಕೆ ನೀಡಬೇಕು. ಅದೇರೀತಿಯಾಗಿ ಬಳ್ಳಾರಿ ತಾಲೂಕು ಭಾಗದ ಕೆಲ ಗ್ರಾಮಗಳಲ್ಲಿಯೂ ಸಹ ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದರು.ಮುಂಗಾರು ಮಳೆ ಆರಂಭಗೊಂಡಿರುವ ಹಿನ್ನೆಲೆ ಮಳೆಯಿಂದಾಗುವ ಹಾನಿ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಪಾಯ ತಲೆದೋರಬಹುದಾದ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ನೀಡಬೇಕು. ಅಲ್ಲಿನ ಮಕ್ಕಳು, ವಯಸ್ಕರು, ಜಾನುವಾರುಗಳನ್ನು ಆಯಾ ಗ್ರಾಮಾಡಳಿತಾಧಿಕಾರಿಗಳ ಸಹಯೋಗದೊಂದಿಗೆ ಗಣತಿ ಮಾಡಿಕೊಂಡು ಇಟ್ಟುಕೊಂಡಿರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅತಿಹೆಚ್ಚು ಮಳೆಯಿಂದಾಗಿ ರಸ್ತೆಗಳಲ್ಲಿ ಮರ ಮತ್ತು ವಿದ್ಯುತ್ ಕಂಬಗಳು ಬೀಳುವುದು ಕಳೆದ ತಿಂಗಳಿನಲ್ಲಾದ ಮಳೆಯಿಂದ ಕಂಡುಬಂದಿದ್ದು, ಅಂತಹ ಮಹಾನಗರ ಪಾಲಿಕೆ, ಇತರೆ ತಾಲೂಕುಗಳ ವ್ಯಾಪ್ತಿಯಲ್ಲಿ ರಸ್ತೆಗೆ ಅಡ್ಡಲಾಗಿ ಇರುವ ಮರಗಳ ಕಟಾವಿಗೆ ಅರಣ್ಯ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಬೇಕು ಎಂದ ಜಿಲ್ಲಾಧಿಕಾರಿ, ದುರಸ್ತಿ ವಿದ್ಯುತ್ ಕಂಬಗಳು ಸಹ ಕಂಡುಬಂದಲ್ಲಿ ಜೆಸ್ಕಾಂ ಇಲಾಖೆಯ ಗಮನಕ್ಕೆ ತರಬೇಕು ಎಂದು ಸೂಚಿಸಿದರು.
ಮಳೆ-ಸಿಡಿಲು ಕುರಿತು ಜಾಗ್ರತೆ ಮೂಡಿಸಿ:
ಮಳೆಗಾಲದಲ್ಲಿ ಜೆಸ್ಕಾಂ ಸಂಬಂಧಿತ ದೂರುಗಳಿದ್ದಲ್ಲಿ ಸಹಾಯವಾಣಿ 1912 ಕುರಿತು ಹೆಚ್ಚಿನ ಪ್ರಚಾರ ನೀಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿರುವುದರಿಂದ ಕೃಷಿ ಚಟುವಟಿಕೆಗಳು ಆರಂಭಗೊಳ್ಳುತ್ತಿವೆ. ಬೀಜ, ರಸಗೊಬ್ಬರ, ಕೀಟ ನಾಶಕ ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದರು.
ಎಡಿಸಿ ಮಹಮ್ಮದ್ ಝುಬೇರ್ ಎನ್., ಸಹಾಯಕ ಆಯುಕ್ತ ಪಿ.ಪ್ರಮೋದ್, ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಸೇರಿ ನೀರಾವರಿ, ಲೋಕೋಪಯೋಗಿ, ಆರ್ಡಿಪಿಆರ್, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲೂಕು ತಹಶೀಲ್ದಾರರು ಸಭೆಯಲ್ಲಿ ಭಾಗವಹಿಸಿದ್ದರು.