ಕನ್ನಡಪ್ರಭ ವಾರ್ತೆ ಮಣಿಪಾಲ
ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸನ್ನದ್ಧರಾಗುವುದರ ಜೊತೆಗೆ ನೆರೆ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.ಮಳೆ, ಗುಡುಗು, ಮಿಂಚು ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳುವಂತೆ ತಿಳಿಸಿದ ಅವರು, ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕಗಳ ಮೂಲಕ ಸುರಕ್ಷತಾ ಕ್ರಮ ಕೈಗೊಳ್ಳುವ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು ಎಂದರು.
ಗಾಳಿಯಿಂದ ಮರಗಳು ಉರುಳಿ ಬಿದ್ದಾಗ ತಕ್ಷಣಕ್ಕೆ ಸ್ಪಂದಿಸಿ, ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಹಾಗೂ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಗಾಲದ ಮೊದಲು ಯಾಂತ್ರೀಕೃತ ದೋಣಿ ಆಳ ಸಮುದ್ರದ ಮೀನುಗಾರಿಕೆಯನ್ನು ನಿಷೇಧಿಸಬೇಕು. ಹವಾಮಾನ ಇಲಾಖೆಯ ಸಂದೇಶಗಳನ್ನು ಮೀನುಗಾರರಿಗೆ ಸಕಾಲದಲ್ಲಿ ನೀಡಬೇಕು ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಕಂಟ್ರೋಲ್ ರೂಂಗಳು ದಿನದ 24 ಗಂಟೆಗಳಲ್ಲಿಯೂ ತೆರೆದಿದ್ದು, ದೂರುಗಳು ಬಂದಲ್ಲಿ ಕೂಡಲೇ ಸ್ಪಂದಿಸಬೇಕು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಸಹಾಯಕ ಕಮೀಷನರ್ ರಶ್ಮಿ ಎಸ್., ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು, ತಹಸೀಲ್ದಾರ್ಗಳು, ತಾಲೂಕು ಪಂಚಾಯಿತಿ ಇಒಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.