ಗಾಣಗಾಪುರದ ದತ್ತ ಮಂದಿರಕ್ಕೆ ಡಿಸಿ ದಿಢೀರ್‌ ಭೇಟಿ

KannadaprabhaNewsNetwork |  
Published : Sep 01, 2026, 02:00 AM IST
ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ರಾತ್ರಿ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಭೇಟಿ ನೀಡಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರ ಪರಿಶೀಲಿಸಿದರು. ಎಸ್ಪಿ ಅಡ್ಡೂರು ಶ್ರೀನಿವಾಸಲು, ಜಿ.ಪಂ. ಸಿಇಒ ರಾಹುಲ್ ಸಂಕನೂರ, ಶಿಖರ್ ಮೋಘಾ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶಿವಕಾಂತಮ್ಮ ಇತರರು ಇದ್ದರು    | Kannada Prabha

ಸಾರಾಂಶ

ತಾಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಗುರುವಾರ ರಾತ್ರಿ 1ಕ್ಕೆ ಜಿಲ್ಲಾಧಿಕಾರಿ ಇಕ್ರಂ ಶರೀಫ್, ಕೆಕೆಆರ್‌ಡಿಬಿ ಕಾರ್ಯದರ್ಶಿ ನಳಿನ್ ಅತುಲ್, ಜಿ.ಪಂ. ಸಿಇಒ ರಾಹುಲ ಸಂಕನೂರ, ಎಸ್ಪಿ ಅಡ್ಡೂರು ಶ್ರೀನಿವಾಸಲು ದತ್ತಾತ್ರೇಯ ಭೇಟಿ ನೀಡಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರ, ಭಕ್ತರ ಸಂಚಾರ, ಸ್ವಚ್ಛತೆ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಅಫಜಲಪುರ

ತಾಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಗುರುವಾರ ರಾತ್ರಿ 1ಕ್ಕೆ ಜಿಲ್ಲಾಧಿಕಾರಿ ಇಕ್ರಂ ಶರೀಫ್, ಕೆಕೆಆರ್‌ಡಿಬಿ ಕಾರ್ಯದರ್ಶಿ ನಳಿನ್ ಅತುಲ್, ಜಿ.ಪಂ. ಸಿಇಒ ರಾಹುಲ ಸಂಕನೂರ, ಎಸ್ಪಿ ಅಡ್ಡೂರು ಶ್ರೀನಿವಾಸಲು ದತ್ತಾತ್ರೇಯ ಭೇಟಿ ನೀಡಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರ, ಭಕ್ತರ ಸಂಚಾರ, ಸ್ವಚ್ಛತೆ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ರಾತ್ರಿ ವೇಳೆಯಲ್ಲಿಯೂ ದೇವಸ್ಥಾನಕ್ಕೆ ಆಗಮಿಸುತ್ತಿದ್ದ ಭಕ್ತರ ಸಂಚಾರವನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಭಕ್ತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕೈಗೊಳ್ಳಲಾಗಿರುವ ವ್ಯವಸ್ಥೆಗಳ ಕುರಿತು ಸ್ಥಳದಲ್ಲೇ ಪರಿಶೀಲಿಸಿದರು. ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ, ಬೆಳಕಿನ ವ್ಯವಸ್ಥೆ, ಭಕ್ತರ ಸರದಿ ವ್ಯವಸ್ಥೆ ಹಾಗೂ ವಾಹನಗಳ ಸಂಚಾರದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬಳಿಕ ದೇವಲಗಾಣಗಾಪುರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಸಾರ್ವಜನಿಕರು ಹಾಗೂ ವಿವಿಧೆಡೆಯಿಂದ ಆಗಮಿಸುವ ಭಕ್ತರ ಸುಗಮ ಸಂಚಾರಕ್ಕಾಗಿ ಕೈಗೊಳ್ಳಲಾಗಿರುವ ವ್ಯವಸ್ಥೆಗಳನ್ನು ಅವಲೋಕಿಸಿದರು. ಭಕ್ತರ ಸಂಖ್ಯೆ ಹೆಚ್ಚಾಗುವ ಸಂದರ್ಭ ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ನಂತರ ಧಾರ್ಮಿಕ ದತ್ತಿ ಇಲಾಖೆಯ ವಸತಿಗೃಹಕ್ಕೆ ಭೇಟಿ ನೀಡಿ, ಭಕ್ತರ ವಾಸ್ತವ್ಯಕ್ಕೆ ಕಲ್ಪಿಸಲಾಗಿರುವ ಕೊಠಡಿಗಳ ವ್ಯವಸ್ಥೆ, ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಸಹಿತ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಪರಿಶೀಲಿಸಿದರು. ವಸತಿಗೃಹದಲ್ಲಿ ಭಕ್ತರಿಗೆ ಉತ್ತಮ ಸೇವೆ ಒದಗಿಸುವಂತೆ ಹಾಗೂ ಯಾವುದೇ ಕೊರತೆ ಕಂಡುಬಂದಲ್ಲಿ ತಕ್ಷಣವೇ ಪರಿಹರಿಸುವಂತೆ ಸೂಚಿಸಿದರು.ಗಾಣಗಾಪುರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶಿವಕಾಂತಮ್ಮ ಹಾಗೂ ದೇವಲಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ಸಂಗೀತಾ ಶಿಂಧೆ ಅಧಿಕಾರಿಗಳಿಗೆ ದೇವಸ್ಥಾನದಲ್ಲಿನ ವ್ಯವಸ್ಥೆಗಳು ಹಾಗೂ ಭದ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಶಿಖರ್ ಮೋಘಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

KPSC ನೇಮಕಾತಿ ಅಕ್ರಮ: ಬೀದರ್‌ನಲ್ಲೇ ಬೇರು
ಅಫಜಲಪುರ ಆಸ್ಪತ್ರೆಗೆ ಕೆಕೆಆರ್‌ಟಿಸಿ ಅಧ್ಯಕ್ಷ ಭೇಟಿ